alex Certify BIG NEWS: ನಾಯಿ ಕಡಿತದಿಂದ ಚಿಕಿತ್ಸೆ ಸಿಗದೇ 5 ವರ್ಷದ ಬಾಲಕ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಾಯಿ ಕಡಿತದಿಂದ ಚಿಕಿತ್ಸೆ ಸಿಗದೇ 5 ವರ್ಷದ ಬಾಲಕ ಸಾವು

ಚಿಕ್ಕಬಳ್ಳಾಪುರ: 5 ವರ್ಷದ ಬಾಲಕನೊಬ್ಬ ನಾಯಿ ಕಡಿತದಿಂದ ಸೂಕ್ತ ಚಿಕಿತ್ಸೆ ದೊರೆಯದೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನ ಹೊಸೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ನಡೆದಿದೆ.

5 ವರ್ಷದ ಮಗು ಸಮೀರ್ ಮೃತ ಬಾಲಕ. ಸಮೀರ್ ಗೆ ಅ.30ರಂದು ನಾಯಿ ಕಡಿದಿತ್ತು. ಹೊಸೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಇಂಜಕ್ಷನ್ ನೀಡಲಾಗಿತ್ತು. ಇಂಜಕ್ಷನ್ ಪಡೆದು 5 ದಿನಗಳ ಬಳಿಕ ಬಾಲಕನಿಗೆ ತೀವ್ರ ಜ್ವರ ಶುರುವಾಗಿದೆ. ಮತ್ತೆ ಆಸ್ಪತ್ರೆಗೆ ಕರೆದೊಯ್ದಾಗ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಇಂಧಿರಾ ಗಾಂಧಿ ಮಕ್ಕಳ ಆಸ್ಪತ್ರೆಗೆ ದಾಖಲಿಸಲು ಸೂಚಿಸಿದ್ದಾರೆ.

ಇಂಧಿರಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದ ಮಗುವಿಗೆ ವೈದ್ಯರು ನಾಯಿ ಕಡಿತಕ್ಕೆ ಸೂಕ್ತ ಇಂಜಕ್ಷನ್ ನೀಡಿಲ್ಲ ಎನ್ನಲಾಗಿದೆ. ಇದರಿಂದ ವಿಷ ಮೆದುಳಿಗೆ ಏರಿ ಬಾಲಕ ಮೃತಪಟ್ಟಿದ್ದಾನೆ. ಮಗುವನ್ನು ಕಳೆದುಕೊಂಡ ಪೋಷಕರು ಆಸ್ಪತ್ರೆ ವೈದ್ಯರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...