alex Certify BMW ಕಾರಿಗೆ ಸೈಕಲ್​ ಸವಾರ ಬಲಿ: ಟೈರ್​ ಒಡೆದು ನಿಯಂತ್ರಣ ಕಳೆದುಕೊಂಡ ಚಾಲಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BMW ಕಾರಿಗೆ ಸೈಕಲ್​ ಸವಾರ ಬಲಿ: ಟೈರ್​ ಒಡೆದು ನಿಯಂತ್ರಣ ಕಳೆದುಕೊಂಡ ಚಾಲಕ

ನವದೆಹಲಿ: ವೇಗವಾಗಿ ಬಂದ ಬಿಎಂಡಬ್ಲ್ಯು ಕಾರಿಗೆ ಡಿಕ್ಕಿ ಹೊಡೆದು 50 ವರ್ಷದ ಸೈಕಲ್ ಸವಾರನೊಬ್ಬ ಸಾವನ್ನಪ್ಪಿರುವ ಘಟನೆ ದೆಹಲಿ-ಗುರುಗ್ರಾಮ ರಸ್ತೆಯಲ್ಲಿ ನಡೆದಿದೆ. ಬಿಎಂಡಬ್ಲ್ಯು ಪೂರ್ಣ ವೇಗದಲ್ಲಿ ಹಿಂದಿನಿಂದ ಬಂದು ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ.

ಗಾಯಾಳುವನ್ನು ಸಫ್ದರ್‌ಜಂಗ್ ಆಸ್ಪತ್ರೆಗೆ ಕರೆದೊಯ್ದರೂ ಅದಾಗಲೇ ಆತ ಪ್ರಾಣ ಬಿಟ್ಟಿದ್ದ. ಮೃತನನ್ನು ಗುರುಗ್ರಾಮದ ನಿವಾಸಿ ಶುಭೇಂದು ಚಟರ್ಜಿ ಎಂದು ಗುರುತಿಸಲಾಗಿದೆ. ವಸಂತ್ ಕುಂಜ್ ಉತ್ತರ ಪೊಲೀಸ್ ಠಾಣೆಯಲ್ಲಿ ಅಪಘಾತದ ಬಗ್ಗೆ ಮಾಹಿತಿ ನೀಡಿದ್ದಾರೆ.

ಕಾರಿನ ಒಂದು ಟೈರ್ ಒಡೆದಿರುವುದೇ ಅಪಘಾತಕ್ಕೆ ಕಾರಣ ಇದ್ದಿರಬಹುದು ಎನ್ನಲಾಗಿದೆ. ಟೈರ್​ ಒಡೆದ ಹಿನ್ನೆಲೆಯಲ್ಲಿ ವಾಹನವನ್ನು ನಿಯಂತ್ರಿಸಲು ಸಾಧ್ಯವಾಗದೆ ಚಾಲಕ ಸೈಕಲ್‌ಗೆ ಡಿಕ್ಕಿ ಹೊಡೆದಿದ್ದಾನೆ. ಚಾಲಕನನ್ನು ಬಂಧಿಸಿದ ನಂತರ ನಾವು ಬಿಎಂಡಬ್ಲ್ಯು ಕಾರನ್ನು ವಶಪಡಿಸಿಕೊಂಡಿದ್ದೇವೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...