ಬೆಂಗಳೂರು : ರಾಜ್ಯದಲ್ಲಿ 52,000 ಕೋಟಿ ವೆಚ್ಚದ ನೀರಾವರಿ ಯೋಜನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಎನ್.ಎಸ್.ಭೋಸರಾಜು ಹೇಳಿದ್ದಾರೆ.
ರಾಜ್ಯದಲ್ಲಿ ಬರಗಾಲ ಪೀಡಿತ ಪ್ರದೇಶಗಳನ್ನು ಗುರುತಿಸಿ ಮೂಲ ನೀರಾವರಿ ವ್ಯವಸ್ಥೆ ಕಲ್ಪಿಸಿ ರೈತರಿಗೆ ಅನುಕೂಲ ಮಾಡಿಕೊಡಲು ಆದ್ಯತೆ ನೀಡಲಾಗುತ್ತಿದೆ. ₹52,000 ಕೋಟಿ ವೆಚ್ಚದ ನೀರಾವರಿ ಯೋಜನೆಗೆ ಸಂಬಂಧಿಸಿದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಸಣ್ಣ ನೀರಾವರಿ ಸಚಿವರಾದ ಎನ್.ಎಸ್.ಭೋಸರಾಜು ತಿಳಿಸಿದ್ದಾರೆ.