alex Certify BIG NEWS: ಆಂಧ್ರಪ್ರದೇಶದ ಘಾಟ್ ರಸ್ತೆಯಲ್ಲಿ ಪ್ರಪಾತಕ್ಕೆ ಬಿದ್ದ ಬಸ್, 8 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಆಂಧ್ರಪ್ರದೇಶದ ಘಾಟ್ ರಸ್ತೆಯಲ್ಲಿ ಪ್ರಪಾತಕ್ಕೆ ಬಿದ್ದ ಬಸ್, 8 ಮಂದಿ ಸಾವು

ಆಂಧ್ರಪ್ರದೇಶದ ಅರಕು ಘಾಟ್ ರಸ್ತೆ ಕಣಿವೆಯಲ್ಲಿ ಬಸ್ ಪ್ರಪಾತಕ್ಕೆ ಬಿದ್ದು 8 ಮಂದಿ ಸಾವನ್ನಪ್ಪಿದ್ದಾರೆ. 30 ಪ್ರಯಾಣಿಕರಿದ್ದ ಬಸ್ ಪ್ರಪಾತಕ್ಕೆ ಬಿದ್ದು ಕನಿಷ್ಠ 8 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.

ಶುಕ್ರವಾರ ಸಂಜೆ ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಅರಕು ಘಾಟ್ ರಸ್ತೆಯ ಕಣಿವೆಯಲ್ಲಿ ಘಟನೆ ನಡೆದಿದೆ. ಹೈದರಾಬಾದ್ ನ ದಿನೇಶ್ ಟ್ರಾವೆಲ್ಸ್ ಗೆ ಸೇರಿದ ಬಸ್ ಪ್ರವಾಸಿ ಬಸ್ ಇದಾಗಿದ್ದು, ಅರಕು ಕಣಿವೆಗೆ ಹೋಗುವ ಮಾರ್ಗದಲ್ಲಿ ಅನಂತಗಿರಿ ಗ್ರಾಮದ ಡುಮುಕು ಸಮೀಪ ಕಡಿದಾದ ತಿರುವು ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿ ಬಿದ್ದಿದೆ.

ಮಾಹಿತಿ ತಿಳಿದು ಸ್ಥಳಕ್ಕೆ ರಕ್ಷಣಾ ಸಿಬ್ಬಂದಿ ಆಂಬುಲೆನ್ಸ್ ಸಹಿತ ಧಾವಿಸಿದ್ದು, ರಾತ್ರಿಯ ಕತ್ತಲಲ್ಲೂ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...