alex Certify BIG UPDATE: ನವಿಲುಗಳ ಮಾರಣ ಹೋಮ ಪ್ರಕರಣ; ಓರ್ವ ಆರೋಪಿ ಅರೆಸ್ಟ್; ಇಬ್ಬರು ಎಸ್ಕೇಪ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG UPDATE: ನವಿಲುಗಳ ಮಾರಣ ಹೋಮ ಪ್ರಕರಣ; ಓರ್ವ ಆರೋಪಿ ಅರೆಸ್ಟ್; ಇಬ್ಬರು ಎಸ್ಕೇಪ್

ಬೆಳಗಾವಿ: ಕಬ್ಬಿನ ಗದ್ದೆಯಲ್ಲಿ ನವಿಲುಗಳ ಮಾರಣ ಹೋಮ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಇಬ್ಬರು ಪರಾರಿಯಾಗಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಹೊರವಲಯದಲ್ಲಿ ಕಬ್ಬಿನ ಗದ್ದೆಯಲ್ಲಿ 8 ನವಿಲುಗಳ ಮೃತದೇಹ ಪತ್ತೆಯಾಗಿತ್ತು. ನವಿಲುಗಳಿಗೆ ವಿಷವುಣಿಸಿ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಪ್ರಕರಣ ಸಂಬಂಧ ಝಳಕಿ ಗ್ರಾಮದ ನಿವಾಸಿ ಮಂಜುನಾಥ್ ಪವಾರ್ ಎಂಬಾತನನ್ನು ಬಂಧಿಸಲಾಗಿದೆ. ಆರೋಪಿ ಇಟ್ಟಿಗೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದು, ನವಿಲು ಮಾಂಸಕ್ಕಾಗಿ ಮೆಕ್ಕೆಜೋಳದ ಕಾಳುಗಳಲ್ಲಿ ವಿಷ ಬೆರೆಸಿ ನವಿಲುಗಳನ್ನು ಕೊಲ್ಲಲಾಗಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಪ್ರಕರಣದ ಇಬ್ಬರು ಆರೋಪಿಗಳು ಪರಾರಿಯಾಗಿದ್ದು, ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...