alex Certify 95ನೇ ವಸಂತಕ್ಕೆ ಕಾಲಿಟ್ಟ ಬಿಜೆಪಿ ಭೀಷ್ಮ: ಅಡ್ವಾಣಿಯವರನ್ನು ಭೇಟಿ ಮಾಡಿ ಶುಭ ಕೋರಿದ ಪ್ರಧಾನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

95ನೇ ವಸಂತಕ್ಕೆ ಕಾಲಿಟ್ಟ ಬಿಜೆಪಿ ಭೀಷ್ಮ: ಅಡ್ವಾಣಿಯವರನ್ನು ಭೇಟಿ ಮಾಡಿ ಶುಭ ಕೋರಿದ ಪ್ರಧಾನಿ

‘ಬಿಜೆಪಿ ಭೀಷ್ಮ’ ಎಲ್.ಕೆ.ಅಡ್ವಾಣಿಯವರು ಇಂದು 95ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಎಲ್‌ಕೆ ಅಡ್ವಾಣಿ ಅವರ ಮನೆಗೆ ಭೇಟಿ ನೀಡಿ ಶುಭ ಕೋರಿದ್ದಾರೆ. ಈ ವೇಳೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪ್ರಧಾನಿ ಮೋದಿಯವರೊಂದಿಗೆ ಇದ್ದರು.

ಸಭೆಯ ಕೆಲವು ಫೋಟೋಗಳನ್ನು ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿರುವ ಪ್ರಧಾನಿ ಮೋದಿ, “ಭಾರತದ ಬೆಳವಣಿಗೆಗೆ ಅಡ್ವಾಣಿಯವರ ಕೊಡುಗೆ ಸ್ಮರಣೀಯ” ಎಂದು ಬಣ್ಣಿಸಿದ್ದಾರೆ.

ದೂರದರ್ಶನ ಹಂಚಿಕೊಂಡ ದೃಶ್ಯಗಳಲ್ಲಿ ಪ್ರಧಾನಿ ಮೋದಿ ಅಡ್ವಾಣಿಯವರ ಪುತ್ರಿ ಪ್ರತಿಭಾ ಅಡ್ವಾಣಿಯೊಂದಿಗೆ ಮಾತನಾಡುತ್ತಾ ನಡೆದುಕೊಂಡು ಹೋಗುತ್ತಿರುವುದನ್ನು ನೋಡಬಹುದು. ಅಡ್ವಾಣಿಯವರಿಗೆ ಹೂಗುಚ್ಛ ನೀಡಿದ ಪ್ರಧಾನಿ ಮೋದಿ ನಂತರ ಅವರೊಂದಿಗೆ ಕೆಲಕಾಲ ಮಾತುಕತೆ ನಡೆಸಿದ್ದಾರೆ.

ಹಿರಿಯ ನಾಯಕ ಎಲ್. ಕೆ. ಅಡ್ವಾಣಿಯವರಿಗೆ ಬಿಜೆಪಿಯ ಹಲವು ನಾಯಕರು ಸಹ ಶುಭಾಶಯ ತಿಳಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು “ರಾಷ್ಟ್ರ ಮತ್ತು ಸಂಘಟನೆಗಾಗಿ ನಿಮ್ಮ ಜೀವನವು ನಮಗೆ ಸ್ಫೂರ್ತಿಯಾಗಿದೆ” ಎಂದು ಹೇಳಿದ್ದಾರೆ.

“ಅಡ್ವಾಣಿಯವರು ತಮ್ಮ ಅವಿರತ ಪ್ರಯತ್ನಗಳಿಂದ ದೇಶಾದ್ಯಂತ ಪಕ್ಷದ ಸಂಘಟನೆಯನ್ನು ಬಲಪಡಿಸಿದರು ಮತ್ತು ಸರ್ಕಾರದ ಭಾಗವಾಗಿದ್ದಾಗ ದೇಶದ ಅಭಿವೃದ್ಧಿಗೆ ಅಮೂಲ್ಯ ಕೊಡುಗೆ ನೀಡಿದ್ದಾರೆ” ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರದಲ್ಲಿ ಉಪಪ್ರಧಾನಿಯಾಗಿ ಸೇವೆ ಸಲ್ಲಿಸಿದ ಎಲ್ ಕೆ ಅಡ್ವಾಣಿ, ಕಳೆದ ಮೂರು ದಶಕಗಳಲ್ಲಿ ಬಿಜೆಪಿಯ ಬೆಳವಣಿಗೆಯ ಹಿಂದಿನ ಪ್ರಮುಖ ಶಕ್ತಿಯಾಗಿ ಕಾಣುತ್ತಾರೆ. ಲೋಕಸಭೆಯಲ್ಲಿ ಕೇವಲ 2 ಸ್ಥಾನ ಹೊಂದಿದ್ದ ಬಿಜೆಪಿ 2014 ರಲ್ಲಿ ಸ್ವಂತ ಬಲದ ಮೇಲೆ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸರ್ಕಾರ ರಚಿಸುವವರೆಗೆ ಬಿಜೆಪಿ ಪಕ್ಷಕ್ಕೆ ಅಡ್ವಾಣಿ ಅವರ ಕೊಡುಗೆ ಅಪಾರ.

— ANI (@ANI) November 8, 2022

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...