ತುಮಕೂರು : ನಿವೇಶನ ಕೊಡಿ ಎಂದು 9 ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ರಾಷ್ಟ್ರಪತಿಗಳಿಗೆ ಪತ್ರ ಬರೆಯುವ ಮೂಲಕ ಎಲ್ಲರ ಗಮನ ಸೆಳೆದಿದ್ದಾಳೆ.
9 ನೇ ತರಗತಿ ಓದುತ್ತಿರುವ ಬಾಲಕಿ ಲಕ್ಷ್ಮಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾ ರೆ. ನಾನು ನನ್ನ ಕುಟುಂಬ ಗುಡಿಸಲಿನಲ್ಲಿ ವಾಸ ಮಾಡುತ್ತಿದ್ದೇವೆ. ಇದರಿಂದ ನಮಗೆ ಬಹಳ ಕಷ್ಟ ಆಗುತ್ತಿದೆ. ಅಲ್ಲದೇ ತಮ್ಮ ಕುಟುಂಬ ಸಮಸ್ಯೆ ಬಗ್ಗೆ ಕೂಡ ಹೇಳಿಕೊಂಡಿದ್ದಾಳೆ. ನಾವು ವಾಸಿಸುತ್ತಿರುವ ಸ್ಥಳದಲ್ಲಿ ಮನೆ ಕಟ್ಟಿಕೊಳ್ಳಲು ಸಂಬಂಧಿಕರು ತಕರಾರು ಮಾಡುತ್ತಿದ್ದಾರೆ ಎಂದು ಆಕೆ ಹೇಳಿದ್ದಾಳೆ. ಮನೆ ಕಟ್ಟಲು ಗ್ರಾ.ಪಂ ಅನುದಾನ ಬಿಡುಗಡೆ ಮಾಡಿದರೂ ಮನೆ ಕಟ್ಟುವುದಕ್ಕೆ ಸಾಧ್ಯವಾಗುತ್ತಿಲ್ಲ. ದಯಮಾಡಿ ಮನೆ ಕಟ್ಟಿಕೊಳ್ಳಲು ನಿವೇಶನ ಕೊಡಿ ಎಂದು ಪತ್ರ ಬರೆದಿದ್ದಾಳೆ. ರಾಷ್ಟ್ರಪತಿಗಳಿಗೆ ಪತ್ರ ಬರೆದ ಬಾಲಕಿಯನ್ನು ಭೇಟಿ ಮಾಡಿದ ತಹಶೀಲ್ದಾರ್ ವೈ.ಎಂ.ರೇಣುಕುಮಾರ್ ಬಾಲಕಿಯ ಸಮಸ್ಯೆಯನ್ನು ಆಲಿಸಿದ್ದಾರೆ ಎಂದು ತಿಳಿದು ಬಂದಿದೆ.