alex Certify BIG NEWS : ಬೆಳ್ಳೂರು ಪಟ್ಟಣದಲ್ಲಿ ಹಿಂದೂ ಯುವಕನ ಮೇಲೆ ಹಲ್ಲೆ ಕೇಸ್ ; ದೂರು ಸ್ವೀಕರಿಸಲು ನಿರಾಕರಿಸಿದ್ದ ‘PSI’ ಅಮಾನತು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಬೆಳ್ಳೂರು ಪಟ್ಟಣದಲ್ಲಿ ಹಿಂದೂ ಯುವಕನ ಮೇಲೆ ಹಲ್ಲೆ ಕೇಸ್ ; ದೂರು ಸ್ವೀಕರಿಸಲು ನಿರಾಕರಿಸಿದ್ದ ‘PSI’ ಅಮಾನತು

ಮಂಡ್ಯ : ಬೆಳ್ಳೂರು ಪಟ್ಟಣದಲ್ಲಿ ಹಿಂದೂ ಯುವಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ಸ್ವೀಕರಿಸಲು ನಿರಾಕರಿಸಿದ್ದ ಪಿಎಸ್ ಐ ರನ್ನು ಅಮಾನತುಗೊಳಿಸಲಾಗಿದೆ.

ದೂರು ಸ್ವೀಕರಿಸಲು ನಿರಾಕರಿಸಿದ್ದ ಬೆಳ್ಳೂರು ಠಾಣೆ ಪಿಎಸ್ ಐ ಬಸವರಾಜು ಚಿಂಚೋಳಿ ಯನ್ನು ಅಮಾನತು ಮಾಡಲಾಗಿದೆ.

ಜಿಲ್ಲೆಯ ನಾಗಮಂಗಲತಾಲೂಕಿನ ಬೆಳ್ಳೂರು ಪಟ್ಟಣದಲ್ಲಿ ಹಿಂದೂ ಯುವಕನ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಪ್ರತ್ಯೇಕ ದೂರು ದಾಖಲಾಗಿದೆ. ಹಲ್ಲೆಗೊಳಗಾದ ಅಭಿಲಾಷ್ ತಂದೆ ರಾಮು, ಅಭಿಲಾಷ್ ಅತ್ತೆ ರಶ್ಮಿ ಹಾಗೂ ಮಂಜುಳಾ ಎಂಬುವವರು ಮಂಡ್ಯ ಎಸ್ಪಿ ಯತೀಶ್ ಸಮ್ಮುಖದಲ್ಲಿ ದೂರು ದಾಖಲು ಮಾಡಿದ್ದಾರೆ. ದೂರು ಸ್ವೀಕರಿಸದ ಪೊಲೀಸರ ವಿರುದ್ಧವೂ ಕಂಪ್ಲೇಂಟ್ ದಾಖಲಿಸಿದ್ದರು. ಮೊಹ್ಮದ್ ಹುಜೈಫ್, ಇಮ್ರಾನ್, ಸಮೀರ್ ಸೂಫಿಯಾನ್ ಮತ್ತು ಇರ್ಫಾನ್ ಸೇರಿದಂತೆ ಹಲವರ ವಿರುದ್ಧ ದೂರು ದಾಖಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...