alex Certify Bengaluru : ಬನ್ನೇರುಘಟ್ಟ ಝೂ ನಲ್ಲಿ ಬ್ಯಾಟರಿ ಚಾಲಿತ ವಾಹನಕ್ಕೆ ಸಿಲುಕಿದ ಮಗು, ಗಂಭೀರ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Bengaluru : ಬನ್ನೇರುಘಟ್ಟ ಝೂ ನಲ್ಲಿ ಬ್ಯಾಟರಿ ಚಾಲಿತ ವಾಹನಕ್ಕೆ ಸಿಲುಕಿದ ಮಗು, ಗಂಭೀರ ಗಾಯ

ಬೆಂಗಳೂರು : ಬ್ಯಾಟರಿ ಚಾಲಿತ ವಾಹನಕ್ಕೆ ಮಗುವೊಂದು ಸಿಲುಕಿ ಮಗುವಿಗೆ ಗಂಭೀರ ಗಾಯಗಳಾದ ಘಟನೆ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನಡೆದಿದೆ.

ಕಳೆದ ಎರಡು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಶ್ರೀಧರ್ (3) ಎಂಬ ಮಗು ಗಂಭೀರವಾಗಿ ಗಾಯಗೊಂಡಿದೆ.

ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಬಿಜಾಪುರ ಮೂಲದ ಕುಟುಂಬವೊಂದು ಬಂದಿತ್ತು, ಝೂ ನ ರಸ್ತೆ ಬದಿ ಶ್ರೀಧರ್ ತನ್ನ ತಾಯಿ ಜೊತೆ ನಿಂತಿದ್ದನು, ಪ್ರವಾಸಿಗರನ್ನು ಕೂರಿಸಿಕೊಂಡು ಬ್ಯಾಟರಿ ಚಾಲಿತ ವಾಹನವೊಂದು ಬಂದಿದೆ. ಕೂಡಲೇ ಬಾಲಕ ರಸ್ತೆಗೆ ಅಡ್ಡಲಾಗಿ ಓಡಿದ್ದು, ವಾಹನದ ಅಡಿ ಸಿಲುಕಿದ್ದಾನೆ. ಗಂಭೀರವಾಗಿ ಗಾಯಗೊಂಡ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದೆ. ಸದ್ಯ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದು ಬಂದಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...