ಬೆಂಗಳೂರು : ಆರ್.ಸಿ.ಬಿ ಅಭಿಮಾನಿಗಳ ದಶಕಗಳ ಕನಸು ಈಡೇರಿದೆ, ಈ ಸಲ ಕಪ್ ನಮ್ದೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶಂಸೆ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.
ಇಂದಿನ #TATAWPL ಫೈನಲ್ ಪಂದ್ಯದಲ್ಲಿ ಡೆಲ್ಲಿ ತಂಡವನ್ನು ಮಣಿಸಿ ಆರ್.ಸಿ.ಬಿ ತಂಡ ಚಾಂಪಿಯನ್ಶಿಪ್ ಅನ್ನು ಮುಡಿಗೇರಿಸಿಕೊಂಡಿದೆ. ಇಡೀ ಪಂದ್ಯಾಕೂಟದುದ್ದಕ್ಕೂ ಸಂಘಟಿತ ಪ್ರದರ್ಶನ ನೀಡಿರುವ ನಮ್ಮ ಹುಡುಗಿಯರ ಆಟ ಅಭಿನಂದನಾರ್ಹ. ಕ್ರಿಕೆಟ್ ಪ್ರೇಮಿಯಾದ ನನಗೆ ಈ ಗೆಲುವು ಅತ್ಯಂತ ಖುಷಿಕೊಟ್ಟಿದೆ. ಆರ್.ಸಿ.ಬಿ ಅಭಿಮಾನಿಗಳ ದಶಕಗಳ ಕನಸು ಇಂದು ಈಡೇರಿದೆ. ಐಪಿಎಲ್ ನಲ್ಲಿಯೂ ನಮ್ಮ ಹುಡುಗರು ಕಪ್ ಗೆಲ್ಲಲಿ ಎಂಬ ಹಾರೈಕೆ ನನ್ನದು. ಈ ಸಲ ಕಪ್ ನಮ್ದೆ…… ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.