ಬೆಂಗಳೂರು : ಮನೆಯ ನೀರಿನ ಸಂಪ್ ನಲ್ಲಿ ಮಹಿಳೆಯ ಕೊಳೆತ ಶವ ಪತ್ತೆಯಾದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಲಕ್ಷ್ಮೀಪುರದಲ್ಲಿ ನಡೆದಿದೆ.
ಭಾಗ್ಯಮ್ಮ ಎಂಬುವವರಿಗೆ ಸೇರಿದ ಮನೆಯೊಂದರ ನೀರಿನ ಸಂಪ್ ನಲ್ಲಿ 40 ವರ್ಷದ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. 3 ದಿನಗಳ ಹಿಂದೆ ಮಹಿಳೆಯನ್ನು ಕೊಲೆ ಮಾಡಿ ಸಂಪ್ ಗೆ ಎಸೆದಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.