alex Certify BREAKING : ಇಂದು ಸಂಜೆ 7 ಗಂಟೆಗೆ ‘ಜೆಡಿಎಸ್’ ಶಾಸಕಾಂಗ ಪಕ್ಷದ ಸಭೆ ನಿಗದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಇಂದು ಸಂಜೆ 7 ಗಂಟೆಗೆ ‘ಜೆಡಿಎಸ್’ ಶಾಸಕಾಂಗ ಪಕ್ಷದ ಸಭೆ ನಿಗದಿ

ಬೆಂಗಳೂರು : ಇಂದು ಸಂಜೆ 7 ಗಂಟೆಗೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದ್ದು, ಜೆಡಿಎಸ್ ವರಿಷ್ಟ ಹೆಚ್ ಡಿ ದೇವೇಗೌಡ ಉಪಸ್ಥಿತರಿರಲಿದ್ದಾರೆ.

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಇಂದು ಸಂಜೆ 7 ಗಂಟೆಗೆ ಜೆಡಿಎಸ್ ಪಕ್ಷದ ಶಾಸಕಾಂಗ ಸಭೆ ನಡೆಯಲಿದ್ದು, ಸಭೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಮತ್ತಿತರರು ಹಾಜರಿರಲಿದ್ದಾರೆ. ಸಭೆಯಲ್ಲಿ ಪ್ರಮುಖ ರಾಜಕೀಯ ವಿಚಾರ ಹಾಗೂ ಎನ್ ಡಿ ಎ ಮೈತ್ರಿಕೂಟ ಸೇರ್ಪಡೆ ಬಗ್ಗೆ ಜೆಡಿಎಸ್ ನಾಯಕರು ಚರ್ಚೆ ನಡೆಸಲಿದ್ದಾರೆ.

ನಿನ್ನೆಯ ಬೆಳವಣಿಗೆಗೆ ಆಡಳಿತ ಪಕ್ಷದ ನಡವಳಿಕೆಯೇ ಕಾರಣ : ಮಾಜಿ ಸಿಎಂ HDK ಕಿಡಿ

ಬೆಂಗಳೂರು : ವಿಧಾನಸಭೆಯಲ್ಲಿ ನಿನ್ನೆ ನಡೆದ ಬೆಳವಣಿಗೆಗೆ ಆಡಳಿತ ಪಕ್ಷದ ನಡವಳಿಕೆಯೇ ಕಾರಣ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಐಎಎಸ್ ಅಧಿಕಾರಿಗಳ ದುರುಪಯೋಗ ಬಗ್ಗೆ ನಿನ್ನೆ ಸದನದಲ್ಲಿ ಬಿಜೆಪಿ ಸದಸ್ಯರು ಪ್ರಸ್ತಾಪ ಮಾಡಿದ್ದರು. ಆಡಳಿತ ಪಕ್ಷದವರು ತಪ್ಪೆ ಮಾಡಿಲ್ಲ ಎಂದು ಉದ್ಧಟತನ ತೋರಿದ್ರು ಎಂದು ಕಾಂಗ್ರೆಸ್ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ವಿಧಾನಸಭೆಯಲ್ಲಿ ಶಾಸಕರು ಆ ರೀತಿಯಲ್ಲಿ ವರ್ತನೆ ಮಾಡಿದ್ದಕ್ಕೆ ಆಡಳಿತ ಪಕ್ಷದ ನಡವಳಿಕೆಯೇ ಕಾರಣ ಎಂದು ಕಿಡಿಕಾರಿದರು.

ಮೈತ್ರಿಕೂಟ ರಚನೆ ಸಭೆಗೆ ಬಂದಿದ್ದ ರಾಜಕೀಯ ವ್ಯಕ್ತಿಗಳ ಅತಿಥ್ಯಕ್ಕೆ ರಾಜ್ಯದ ಐಎಎಸ್ ಅಧಿಕಾರಿಗಳನ್ನು ನಿಯೋಜಿಸಿದ ಕ್ರಮಕ್ಕೆ ಬಿಜೆಪಿ ನಿನ್ನೆ ವಿಧಾನಸಭೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...