alex Certify BREAKING NEWS: ಲಂಚ ಸ್ವೀಕರಿಸುತ್ತಿದ್ದ ಜಿಲ್ಲಾಸ್ಪತ್ರೆ ಸರ್ಜನ್, ಆಡಳಿತಾಧಿಕಾರಿಗೆ ಎಸಿಬಿ ಬಿಗ್ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಲಂಚ ಸ್ವೀಕರಿಸುತ್ತಿದ್ದ ಜಿಲ್ಲಾಸ್ಪತ್ರೆ ಸರ್ಜನ್, ಆಡಳಿತಾಧಿಕಾರಿಗೆ ಎಸಿಬಿ ಬಿಗ್ ಶಾಕ್

ಕೋಲಾರ: ಕೋಲಾರ ಜಿಲ್ಲಾ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಮತ್ತು ಆಡಳಿತಾಧಿಕಾರಿ ಲಂಚ ಸ್ವೀಕರಿಸುವಾಗಲೇ ಎಸಿಬಿ ಬಲೆಗೆ ಬಿದ್ದಿದ್ದಾರೆ.

25,000 ರೂ. ಲಂಚ ಸ್ವೀಕರಿಸುತ್ತಿದ್ದ ಜಿಲ್ಲಾಸ್ಪತ್ರೆ ಶಸ್ತ್ರಚಿಕಿತ್ಸಕ ಮತ್ತು ಮುಖ್ಯ ಆಡಳಿತಾಧಿಕಾರಿ ಅವರು ಎಸಿಬಿ ಬಲೆಗೆ ಬಿದ್ದಿದ್ದಾರೆನ್ನಲಾಗಿದೆ. ಆಸ್ಪತ್ರೆಗೆ ವಸ್ತು ಸರಬರಾಜು ಮಾಡಿದ್ದ ಕಿರಣ್ ಕುಮಾರ್ ಅವರಿಂದ ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಕೊರೋನಾ ವೇಳೆ ಆಸ್ಪತ್ರೆಗೆ ಪ್ಲೇಟ್, ಲೋಟ ಪೂರೈಕೆ ಮಾಡಿದ ಸರಬರಾಜುದಾರ ಕಿರಣ್ ಕುಮಾರ್ ಅವರಿಂದ ಬಿಲ್ ಮಂಜೂರಾತಿ ಮಾಡಲು 25 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...