alex Certify BREAKING: ಬೆಳ್ಳಂಬೆಳಗ್ಗೆ ಬಿಗ್ ಶಾಕ್; ಆದಾಯ ಮೀರಿ ಆಸ್ತಿ ಗಳಿಸಿದ ಅಧಿಕಾರಿಗಳ ಮನೆ ಬಾಗಿಲು ಬಡಿದ ಎಸಿಬಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬೆಳ್ಳಂಬೆಳಗ್ಗೆ ಬಿಗ್ ಶಾಕ್; ಆದಾಯ ಮೀರಿ ಆಸ್ತಿ ಗಳಿಸಿದ ಅಧಿಕಾರಿಗಳ ಮನೆ ಬಾಗಿಲು ಬಡಿದ ಎಸಿಬಿ

ಬೆಂಗಳೂರು: ರಾಜ್ಯದ ವಿವಿಧ ಕಡೆ ಎಸಿಬಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ಮಾಡಿದ್ದು, ಆದಾಯ ಮೀರಿ ಆಸ್ತಿ ಗಳಿಸಿದ ಅಧಿಕಾರಿಗಳ ಮನೆ ಬಾಗಿಲು ಬಡಿದಿದ್ದಾರೆ.

ಯಾದಗಿರಿಯಲ್ಲಿ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜೆಸ್ಕಾಂ ಲೆಕ್ಕಾಧಿಕಾರಿ ರಾಜು ಪತ್ತಾರ ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ. ಯಾದಗಿರಿ ನಗರದ ಸಹಾರ ಕಾಲೋನಿಯಲ್ಲಿರುವ ಮನೆ ಮೇಲೆ ದಾಳಿ ನಡೆಸಲಾಗಿದೆ. 20 ವರ್ಷದಿಂದ ಲೆಕ್ಕಾಧಿಕಾರಿಯಾಗಿ ರಾಜು ಪತ್ತಾರ ಕೆಲಸ ಮಾಡುತ್ತಿದ್ದು ಆದಾಯ ಮೀರಿ ಆಸ್ತಿ ಗಳಿಕೆಯ ಬಗ್ಗೆ ದೂರು ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ಎಸಿಬಿ ಪೊಲೀಸ್ ಅಧೀಕ್ಷಕ ಮಹೇಶ ಮೇಘಣ್ಣವರ ನೇತೃತ್ವದಲ್ಲಿ ದಾಳಿ ಮಾಡಲಾಗಿದ್ದು ಮನೆಯಲ್ಲಿ ನಗದು, ಚಿನ್ನಾಭರಣ ಸೇರಿ ಅಪಾರ ಆಸ್ತಿ ಪತ್ತೆಯಾಗಿದೆ ಎನ್ನಲಾಗಿದೆ.

ಮಂಡ್ಯದಲ್ಲಿ ಸಾರಿಗೆ ಇಲಾಖೆ ಪ್ರಥಮ ದರ್ಜೆ ಸಹಾಯಕ ಚನ್ನವೀರಪ್ಪನವರ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಂಡ್ಯದ ಕುವೆಂಪುನಗರದ ಮನೆ, ಮಂಡ್ಯ ತಾಲೂಕಿನ ಆಲಕೆರೆ ಗ್ರಾಮದ ಮನೆ ಮೇಲೆ ದಾಳಿ ನಡೆಸಲಾಗಿದೆ. ಮಂಡ್ಯ ಸಾರಿಗೆ ಇಲಾಖೆ ಆಯುಕ್ತರ ಕಚೇರಿಯಲ್ಲಿ, ಮೈಸೂರು ಆರ್.ಟಿ.ಒ. ಕಚೇರಿಯಲ್ಲಿ ಅವರು ಕೆಲಸ ಮಾಡಿದ್ದಾರೆ. ಎಸಿಬಿ ಅಧಿಕಾರಿಗಳ ತಂಡ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...