alex Certify BREAKING: ರಂಜಾನ್ ಸಂಭ್ರಮದಲ್ಲಿದ್ದ ವಿದ್ಯಾರ್ಥಿಗಳಿಬ್ಬರು ಅಪಘಾತದಲ್ಲಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಂಜಾನ್ ಸಂಭ್ರಮದಲ್ಲಿದ್ದ ವಿದ್ಯಾರ್ಥಿಗಳಿಬ್ಬರು ಅಪಘಾತದಲ್ಲಿ ಸಾವು

ಬೆಂಗಳೂರು: ಟಾಟಾ ಏಸ್ ಡಿಕ್ಕಿ ಹೊಡೆದು ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಹೆಗ್ಗನಹಳ್ಳಿಯ ಮುಖ್ಯ ರಸ್ತೆಯಲ್ಲಿ ತಡರಾತ್ರಿ ಘಟನೆ ನಡೆದಿದೆ.

ಬೈಕ್ ಗೆ ಟಾಟಾ ಏಸ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಒಬ್ಬ ಸವಾರ ಗಾಯಗೊಂಡಿದ್ದಾರೆ. ಮೊಹಮ್ಮದ್ ಫಾರುಕ್ ಮತ್ತು ಅಬ್ರಾರ್ ಅಹಮದ್ ಮೃತಪಟ್ಟವರು ಎಂದು ಹೇಳಲಾಗಿದೆ. ಮಹಮ್ಮದ್ ಸಿದ್ದಿಕ್ ಎಂಬಾತನಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೆಗ್ಗನಹಳ್ಳಿ ಸಮೀಪ ಮೂವರು ಬೈಕ್ ನಿಲ್ಲಿಸಿಕೊಂಡು ನಿಂತಿದ್ದ ವೇಳೆ ವೇಗವಾಗಿ ಬಂದ ಟಾಟಾ ಏಸ್ ವಾಹನ ಡಿಕ್ಕಿಯಾಗಿ ದುರಂತ ಸಂಭವಿಸಿದೆ. ಅಪಘಾತ ಬಳಿಕ ಟಾಟಾ ಏಸ್ ವಾಹನ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.

ಮೃತ ಫಾರೂಕ್ ಮತ್ತು ಅಹಮದ್ ಪಿಯುಸಿ ವಿದ್ಯಾರ್ಥಿಗಳಾಗಿದ್ದಾರೆ. ಮೂವರು ಸ್ಕ್ರಾಪ್ ಅಂಗಡಿಯಲ್ಲಿ ಕೆಲಸ ಮಾಡಿಕೊಂಡು ಓದುತ್ತಿದ್ದರು. ರಂಜಾನ್ ಉಪವಾಸ ಮುಗಿಸಿ ತಂದೆ ಬಳಿ ಹಣ ಪಡೆದು ಚಪ್ಪಲಿ ಖರೀದಿಸಲು ಅಂಗಡಿಗೆ ಹೋಗಿದ್ದ ವೇಳೆ ಅಪಘಾತ ನಡೆದಿದೆ. ಪೀಣ್ಯ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...