alex Certify ಶಾಲೆಗೆ ಹೋಗುವಾಗಲೇ ಅಪಘಾತ: ಬಸ್ ಡಿಕ್ಕಿಯಾಗಿ ಬಾಲಕ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲೆಗೆ ಹೋಗುವಾಗಲೇ ಅಪಘಾತ: ಬಸ್ ಡಿಕ್ಕಿಯಾಗಿ ಬಾಲಕ ಸಾವು

ಶಿವಮೊಗ್ಗ: ಬೈಕ್ ಡಿಕ್ಕಿಯಾಗಿ ಶಾಲಾ ಬಾಲಕ ಮೃತಪಟ್ಟ ಘಟನೆ ಶಿವಮೊಗ್ಗದ ಮಲವಗೊಪ್ಪದಲ್ಲಿ ನಡೆದಿದೆ. ಹೊಳೆಹೊನ್ನೂರು ಸಮೀಪದ ಸಿದ್ಲಿಪುರ ಗ್ರಾಮದ ಲೋಕೇಶ್ ಅವರ ಪುತ್ರ ಚಿರಂತ್(12) ಸ್ಥಳದಲ್ಲೇ ಮೃತಪಟ್ಟ ಬಾಲಕ.

ಗುರುವಾರ ಶಾಲಾ ವಾಹನ ಹತ್ತಲು ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿ ಹೊಡೆದು ಚಿರಂತ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸಿದ್ಲೀಪುರದ ಲೋಕೇಶ್ ಕೆಲಸದ ನಿಮಿತ್ತ ಮಲವಗೊಪ್ಪದಲ್ಲಿ ವಾಸವಾಗಿದ್ದರು. ಮೃತದೇಹವನ್ನು ಗ್ರಾಮಕ್ಕೆ ತಂದು ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ. ಚಿರಂತ್ ಸಾವಿನಿಂದಾಗಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...