alex Certify ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 12 ಕ್ಕೆ ಏರಿಕೆ: ಸಾವಿನಲ್ಲೂ ಸಾರ್ಥಕತೆ ಮೆರೆದ ವೇದಾ ಕುಟುಂಬ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 12 ಕ್ಕೆ ಏರಿಕೆ: ಸಾವಿನಲ್ಲೂ ಸಾರ್ಥಕತೆ ಮೆರೆದ ವೇದಾ ಕುಟುಂಬ

ಶಿವಮೊಗ್ಗ: ಧಾರವಾಡ ಸಮೀಪ ಕಳೆದ ವಾರ ನಡೆದ ಅಪಘಾತದಲ್ಲಿ 11 ಮಂದಿ ಮೃತಪಟ್ಟಿದ್ದು, ಈ ಅಪಘಾತದಲ್ಲಿ ಗಾಯಗೊಂಡಿದ್ದ ಶಿವಮೊಗ್ಗದ ವೇದಾ ಮಂಜುನಾಥ್ ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾಗಿದ್ದಾರೆ.

ವೇದಾ ಅವರ ಸಾವಿನ ನೋವಲ್ಲೂ ಕುಟುಂಬದವರು ಸಾರ್ಥಕತೆ ಮೆರೆದಿದ್ದು ಮಾನವೀಯತೆ ತೋರಿ ಅವರ ಅಂಗಾಂಗಗಳನ್ನು ದಾನ ಮಾಡಿದ್ದಾರೆ. ವೇದಾ ಅವರು ಶಿವಮೊಗ್ಗದ ಮಾಜಿ ಶಾಸಕ ಹೆಚ್.ಎಂ. ಚಂದ್ರಶೇಖರಪ್ಪ ಅವರ ಸಹೋದರ ಮಲ್ಲಪ್ಪನವರ ಸೊಸೆಯಾಗಿದ್ದಾರೆ. ಧಾರವಾಡ ಸಮೀಪ ಟಿಪ್ಪರ್ ಮತ್ತು ಟೆಂಪೋ ಟ್ರಾವೆಲರ್ ನಡುವೆ ನಡೆದ ಭೀಕರ ಅಪಘಾತದಲ್ಲಿ 11 ಮಂದಿ ಮೃತಪಟ್ಟು ವೇದಾ ಗಂಭೀರವಾಗಿ ಗಾಯಗೊಂಡಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...