alex Certify ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಟಿಪ್ಪರ್ ಡಿಕ್ಕಿ, ಕಾರ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಟಿಪ್ಪರ್ ಡಿಕ್ಕಿ, ಕಾರ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಶಿವಮೊಗ್ಗ: ಕಾರ್ ಗೆ ಟಿಪ್ಪರ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಮಾಚೇನಹಳ್ಳಿ ಸಮೀಪ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತಿಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಟಿಪ್ಪರ್ ಚಾಲಕನ ಅತಿವೇಗ, ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣವಾಗಿದೆ. ವೇಗವಾಗಿ ಬಂದ ಟಿಪ್ಪರ್ ಡಿವೈಡರ್ ಗೆ ಡಿಕ್ಕಿ ಹೊಡೆದಿದ್ದು ಬಳಿಕ ಒನ್ ವೇ ನಲ್ಲಿ ಬರುತ್ತಿದ್ದ ಕಾರ್ ಗೆ ಡಿಕ್ಕಿ ಹೊಡೆದಿದೆ. ಕಾರ್ ನಲ್ಲಿದ್ದ ಷಣ್ಮುಗ(39) ರಾಮಚಂದ್ರ(40) ಮೃತಪಟ್ಟಿದ್ದಾರೆ.

ಶಿವಮೊಗ್ಗದಿಂದ ಭದ್ರಾವತಿ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಭದ್ರಾವತಿಯಿಂದ ಶಿವಮೊಗ್ಗದ ಕಡೆಗೆ ಬರುತ್ತಿದ್ದ ಕಾರ್ ಗೆ ಡಿಕ್ಕಿ ಹೊಡೆದಿದೆ. ಭೀಕರ ಅಪಘಾತದಿಂದಾಗಿ ಕಾರ್ ಸಂಪೂರ್ಣ ಜಖಂಗೊಂಡಿದೆ.  ಘಟನೆಯ ಬಳಿಕ ಟಿಪ್ಪರ್ ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...