alex Certify ಊರಿಗೆ ತಂಗಿಯ ಮೃತದೇಹ ತರುವಾಗಲೇ ದುರಂತ, ಅಣ್ಣನೂ ಸಾವು; ಕುಟುಂಬಕ್ಕೆ ಆಘಾತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಊರಿಗೆ ತಂಗಿಯ ಮೃತದೇಹ ತರುವಾಗಲೇ ದುರಂತ, ಅಣ್ಣನೂ ಸಾವು; ಕುಟುಂಬಕ್ಕೆ ಆಘಾತ

ಹಾವೇರಿ: ಅಪಘಾತದಿಂದ ಮೃತಪಟ್ಟ ಸಹೋದರಿಯ ಶವವನ್ನು ಬೆಂಗಳೂರಿನಿಂದ ಊರಿಗೆ ತರುತ್ತಿದ್ದ ಅಣ್ಣನೂ ಮಾರ್ಗ ಮಧ್ಯೆ ನಡೆದ ಅಪಘಾತದಲ್ಲಿ ಮೃತಪಟ್ಟ ಘಟನೆ ನಡೆದಿದೆ.

ಹಾವೇರಿ ಜಿಲ್ಲೆ ಹಿರೇಕೆರೂರಿನ ರಾಮು(56) ಮೃತಪಟ್ಟವರು. ರಾಮು ಅವರ ಸಹೋದರಿ ರೇಣುಕಾ ಅವರಿಗೆ ಮೂರು ದಿನಗಳ ಹಿಂದೆ ಅಪಘಾತದಲ್ಲಿ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ರೇಣುಕಾ ಮೃತಪಟ್ಟಿದ್ದಾರೆ.

ರೇಣುಕಾ ಮೃತದೇಹವನ್ನು ತೆಗೆದುಕೊಂಡು ಊರಿಗೆ ಮರಳುತ್ತಿದ್ದ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ.

ಟಿಪ್ಪರ್ ಲಾರಿಗೆ ಹಿಂಬದಿಯಿಂದ ಕಾರ್ ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜಾಗಿ ರಾಮು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಹಿರಿಯೂರು ತಾಲೂಕು ಆಸ್ಪತ್ರೆಗೆ ದಾಖಲಿಸಿದರೂ ಈ ವೇಳೆಗಾಗಲೇ ಮೃತಪಟ್ಟಿದ್ದಾರೆನ್ನಲಾಗಿದೆ. ರೇಣುಕಾ ಮೃತಪಟ್ಟ ಬೆನ್ನಲ್ಲೇ ರಾಮು ಕೂಡ ಮೃತಪಟ್ಟಿದ್ದು, ಇಬ್ಬರನ್ನು ಕಳೆದುಕೊಂಡ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

ಹಿರೇಕೆರೂರು ತಾಲ್ಲೂಕು ವಿಜಯ ಕರ್ನಾಟಕ ಪತ್ರಿಕೆ ವರದಿಗಾರರಾಗಿದ್ದ ರಾಮು ಹಾವೇರಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ, ವಿವಿಧ ಸಂಘ, ಸಂಸ್ಥೆಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...