alex Certify ಭೀಕರ ಅಪಘಾತ: ಕಾಂಗ್ರೆಸ್ ಶಾಸಕ ಸಂಗಮೇಶ್ ಆಪ್ತ ಸಹಾಯಕ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭೀಕರ ಅಪಘಾತ: ಕಾಂಗ್ರೆಸ್ ಶಾಸಕ ಸಂಗಮೇಶ್ ಆಪ್ತ ಸಹಾಯಕ ದುರ್ಮರಣ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ್ ಅವರ ಆಪ್ತ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ಈಶ್ವರ್(47) ಅವರು ಸೋಮವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ರಾತ್ರಿ 9 ಗಂಟೆ ವೇಳೆಗೆ ಚನ್ನಗಿರಿ ರಸ್ತೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಅವರು ಸಾವನ್ನಪ್ಪಿದ್ದಾರೆ.

ಕೂಡ್ಲಿಗೆರೆ ಗ್ರಾಮಕ್ಕೆ ತೆರಳಿದ್ದ ಈಶ್ವರ್, ಕೆಲಸ ಮುಗಿಸಿಕೊಂಡು ಭದ್ರಾವತಿಗೆ ಹಿಂತಿರುಗುತ್ತಿದ್ದ ವೇಳೆ ಲಾರಿಯೊಂದು ಬೈಕ್’ ಗೆ ಹೊಡೆದಿದೆ. ಈಶ್ವರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮೃತರಿಗೆ ಪತ್ನಿ, ಇಬ್ಬರು ಮಕ್ಕಳಿದ್ದಾರೆ. ಈಶ್ವರ್ ಅವರ ಪಾರ್ಥಿವ ಶರೀರವನ್ನು ಸದ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ ಎಂದು ತಿಳಿದುಬಂದಿದೆ.

ಈಶ್ವರ್ ಅವರ ಅಕಾಲಿಕ ನಿಧನ ಶಾಸಕ ಬಿ.ಕೆ. ಸಂಗಮೇಶ್ವರ್ ಹಾಗೂ ಕುಟುಂಬಸ್ಥರಿಗೂ ಸಹ ಆಘಾತ ನೀಡಿದ್ದು, ಮೃತರ ಆತ್ಮಕ್ಕೆ ಸಂತಾಪ ಸೂಚಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Kouzlo vody: Jak udělat z akvária skvělou dekoraci Чешский язык: Тест на IQ: найдите 3 стрелки за Co se stane, když kočku zataháte Originální recept