alex Certify ಘೋರ ದುರಂತ: ಅಪಘಾತ ದೃಶ್ಯ ನೋಡುತ್ತಾ ನಿಂತವರ ಮೇಲೆ ಲಾರಿ ಹರಿದು ಇಬ್ಬರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಘೋರ ದುರಂತ: ಅಪಘಾತ ದೃಶ್ಯ ನೋಡುತ್ತಾ ನಿಂತವರ ಮೇಲೆ ಲಾರಿ ಹರಿದು ಇಬ್ಬರು ಸ್ಥಳದಲ್ಲೇ ಸಾವು

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಗುಳ್ಳಹಳ್ಳಿ ಗ್ರಾಮದ ಸಮೀಪ ಅಪಘಾತದ ದೃಶ್ಯ ನೋಡುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಶನಿವಾರ ರಾತ್ರಿ ಘಟನೆ ನಡೆದಿದೆ.

ದಾವಣಗೆರೆ ಸಮೀಪದ ಅರಸಾಪುರ ಗ್ರಾಮದ ಕಿರಣ ನಾಯಕ(28) ಮತ್ತು ಚನ್ನಗಿರಿ ತಾಲ್ಲೂಕು ನುಗ್ಗೆಹಳ್ಳಿಯ ಸಿದ್ದಿಕ್(39) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಜಮೀಲ್, ರಿಯಾನ್ ಮತ್ತು ಮುಸ್ತಾಫ್ ಅವರು ಗಾಯಗೊಂಡಿದ್ದು, ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ.

ದಾವಣಗೆರೆ ಮೂಲದ ಕುಟುಂಬವೊಂದು ಚಿಕ್ಕಮಗಳೂರು ಪ್ರವಾಸಕ್ಕೆ ತೆರಳಿ ವಾಪಸ್ ದಾವಣಗೆರೆ ಕಡೆಗೆ ಹೋಗುವಾಗ ಚನ್ನಗಿರಿ ತಾಲೂಕಿನ ಹಿರೇಉಡ ಗ್ರಾಮದ ಬಳಿ ಇನೋವಾ ಕಾರಿನ ಟೈರ್ ಪಂಕ್ಚರ್ ಆಗಿದೆ. ಟೈರ್ ಬದಲಾವಣೆ ಮಾಡುವಾಗ ಬೈಕ್ ನಲ್ಲಿ ಬಂದ ನುಗ್ಗೆಹಳ್ಳಿಯ ಜಮೀಲ್ ಮತ್ತು ರಿಹಾನ್ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದು ಗಾಯಗೊಂಡಿದ್ದಾರೆ. ಪೊಲೀಸರ ಗಸ್ತು ವಾಹನ ತಕ್ಷಣವೇ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತಕ್ಕೀಡಾ ವಾಹನವನ್ನು ತೆರವುಗೊಳಿಸುವಾಗ ರಸ್ತೆ ಬದಿ ನಿಂತು ನೋಡುತ್ತಿದ್ದ ಜನರ ಮೇಲೆ ಇದೇ ಸಂದರ್ಭದಲ್ಲಿ ವೇಗವಾಗಿ ಬಂದ ತರಕಾರಿ ತುಂಬಿದ್ದ ಲಾರಿ ಡಿಕ್ಕಿ ಹೊಡೆದಿದೆ. ಜನರ ಮೇಲೆ ಲಾರಿ ಹರಿದಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಲಾರಿ ಚಾಲಕನನ್ನು ಬಂಧಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...