ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರ ಸರ್ವೆ ಸೂಪರ್ವೈಸರ್ ಕೆ.ಟಿ.ಶ್ರೀನಿವಾಸಮೂರ್ತಿಯನ್ನು ಬಂಧಿಸಲಾಗಿದೆ.
ಕೆ.ಆರ್.ಪುರ ಸರ್ವೆ ಸೂಪರ್ವೈಸರ್ ಕೆ.ಟಿ.ಶ್ರೀನಿವಾಸಮೂರ್ತಿ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಅವರ ನಿವಾಸ, ಕಚೇರಿ ಮೇಲೆ ದಾಳಿ ನಡೆಸಿದ್ದರು.
ದಾಳಿ ವೇಳೆ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿ ಪತ್ರಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಶ್ರೀನಿವಾಸಮೂರ್ತಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
ಬೆಂಗಳೂರು, ತುಮಕೂರು ಸೇರಿದಂತೆ ರಾಜ್ಯದಲ್ಲಿ ಏಕಕಾಲಕ್ಕೆ 14 ಕಡೆ ಲೋಕಾಯುಕ್ತ ಅಧಿಕಾರಿಗಳು ನಿನ್ನೆ ದಾಳಿ ಮಾಡಿದ್ದರು. ಏಕಕಾಲಕ್ಕೆ ರಾಜ್ಯದ 14 ಕಡೆ ದಾಳಿ ನಡೆಸಿದ್ದರು. ಕೆ.ಆರ್.ಪುರ ತಾಲೂಕಿನ ಸರ್ವೆ ಸೂಪರ್ ವೈಸರ್ ಕೆ.ಟಿ. ಶ್ರೀನಿವಾಸ್ ಮನೆ, ಕಚೇರಿಗಳ ಮೇಲೆ ದಾಳಿ ಮಾಡಲಾಗಿತ್ತು.