alex Certify ಮೈಸೂರಿಗೆ ಇಂದು ಕೊಲೆ ಆರೋಪಿ ನಟ ದರ್ಶನ್ ಕರೆದೊಯ್ದು ಮಹಜರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೈಸೂರಿಗೆ ಇಂದು ಕೊಲೆ ಆರೋಪಿ ನಟ ದರ್ಶನ್ ಕರೆದೊಯ್ದು ಮಹಜರು

ಚಿತ್ರದುರ್ಗ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮೈಸೂರಿಗೆ ನಟ ದರ್ಶನ್ ಕರೆದೊಯ್ದು ಸ್ಥಳ ಮಹಜರು ನಡೆಸಲಾಗುವುದು.

ರೇಣುಕಾಸ್ವಾಮಿ ಕೊಲೆ ಆರೋಪಿಗಳಾದ ದರ್ಶನ್, ಪವನ್, ನಾಗರಾಜ್, ನಂದೀಶ್, ಲಕ್ಷ್ಮಣ್, ದೀಪಕ್ ಅವರನ್ನು ಸಹ ಮೈಸೂರಿಗೆ ಕರೆದೊಯ್ಯುವ ಸಾಧ್ಯತೆ ಇದೆ. ಪೊಲೀಸರು ಆರೋಪಿಗಳನ್ನು ಕರೆದೊಯ್ದು ಸ್ಥಳ ಮಹಜರು ನಡೆಸಲಿದ್ದಾರೆ. ಖಾಸಗಿ ಹೋಟೆಲ್ ಸೇರಿದಂತೆ ಹಲವೆಡೆ ಸ್ಥಳ ಮಹಜರು ಮಾಡಲಾಗುವುದು.

ಬೆಂಗಳೂರಿನಲ್ಲಿ ರೇಣುಕಾಸ್ವಾಮಿ ಕೊಲೆ ಮಾಡಿದ ನಂತರ ದರ್ಶನ್ ಮೈಸೂರಿಗೆ ತೆರಳಿದ್ದರು. ಮೂರು ದಿನ ಸ್ಟಾರ್ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದರು. ಹೋಟೆಲ್ ನಲ್ಲಿ ಮತ್ತು ಇತರೆಡೆ ಮಹಜರು ನಡೆಸಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...