alex Certify ‘ಕ್ಷಮೆ ಕೇಳದೇ ಇದ್ದರೆ ನಟ ಜಗ್ಗೇಶ್ ಮನೆಗೆ ಮುತ್ತಿಗೆ’ : ವರ್ತೂರು ಸಂತೋಷ್ ಆಪ್ತರ ಎಚ್ಚರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಕ್ಷಮೆ ಕೇಳದೇ ಇದ್ದರೆ ನಟ ಜಗ್ಗೇಶ್ ಮನೆಗೆ ಮುತ್ತಿಗೆ’ : ವರ್ತೂರು ಸಂತೋಷ್ ಆಪ್ತರ ಎಚ್ಚರಿಕೆ

ಬೆಂಗಳೂರು : ಕ್ಷಮೆ ಕೇಳದೇ ಇದ್ದರೆ ನಟ ಜಗ್ಗೇಶ್ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುತ್ತೇವೆ ಎಂದು ವರ್ತೂರು ಸಂತೋಷ್ ಆಪ್ತರು ಎಚ್ಚರಿಕೆ ನೀಡಿದ್ದಾರೆ.

ಮಾತಿನ ಭರದಲ್ಲಿ ವರ್ತೂರು ಸಂತೋಷ್ ಬಗ್ಗೆ ಹೇಳಿಕೆ ನೀಡಿದ ನಟ ಜಗ್ಗೇಶ್ ನಿವಾಸಕ್ಕೆ ಮುತ್ತಿಗೆ ಹಾಕುವುದಾಗಿ ವರ್ತೂರು ಸಂತೋಷ್ ಆಪ್ತರು ಎಚ್ಚರಿಕೆ ನೀಡಿದ್ದಾರೆ.

‘ರಂಗನಾಯಕ’ ಸಿನಿಮಾ ಕಾರ್ಯಕ್ರಮದಲ್ಲಿ ಮಾತನಾಡಿದ ನಟ ಜಗ್ಗೇಶ್ ‘ನಾನು ಹುಲಿ ತರ ಬದುಕಬೇಕು ಅಂತ ನನ್ನ ತಾಯಿ ಹುಲಿ ಉಗುರನ್ನು ಕೊಟ್ಟಳು…ಯಾವನೋ ಕಿತ್ತೋದ್ ನನ್ ಮಗ ರಿಯಲ್ ಹುಲಿ ಉಗುರು ಹಾಕ್ಕೋಂಡ್ ಯಾವುದೋ ಟಿವಿಯಲ್ಲಿ ತಗಲಾಕ್ಕೊಂಡ’ ಎಂದು ನಟ ಜಗ್ಗೇಶ್ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ವರ್ತೂರು ಸಂತೋಷ್ ‘ಬಿಡಿ ಅವರು ದೊಡ್ಡವರು. ನಾನು ಹೇಳುವುದು ಇಷ್ಟೆ, ಕಾಲಾಯ ತಸ್ಮೈ ನಮಃ ಅಷ್ಟೆ’. ಕೆಲವೊಂದಕ್ಕೆ ಮೌನವಾಗಿದ್ದರೆ ಸಾಕು ಉತ್ತರ ಸಿಗುತ್ತದೆ ಎಂದು ಜಗ್ಗೇಶ್ ಮಾತಿಗೆ ವರ್ತೂರು ಪ್ರತಿಕ್ರಿಯೆ ನೀಡಿದ್ದರು.ಜಗ್ಗೇಶ್ ಆಡಿದ ಮಾತಿನ ಬಗ್ಗೆ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದು, ಕೂಡಲೇ ಅವರು ಕ್ಷಮೆ ಕೇಳದಿದ್ದರೆ ಪ್ರತಿಭಟನೆ ನಡೆಸುತ್ತೇವೆ, ಮನೆಗೆ ಮುತ್ತಿಗೆ ಹಾಕುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...