alex Certify ಇಂದು ಗಾಜನೂರಿಗೆ ತೆರಳಬೇಕಿದ್ದ ‘ಪವರ್​ ಸ್ಟಾರ್’​ ಬಾರದ ಲೋಕಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಗಾಜನೂರಿಗೆ ತೆರಳಬೇಕಿದ್ದ ‘ಪವರ್​ ಸ್ಟಾರ್’​ ಬಾರದ ಲೋಕಕ್ಕೆ

ಸ್ಯಾಂಡಲ್​ವುಡ್​ ಪವರ್​ ಸ್ಟಾರ್​ ಪುನೀತ್​ ರಾಜಕುಮಾರ್​ ಇನ್ನಿಲ್ಲ ಎಂಬ ಸುದ್ದಿ ಬರ ಸಿಡಿಲಿನಂತೆ ಬಂದೆರಗಿದೆ.

ದೈಹಿಕ ಕಸರತ್ತು ನಡೆಸುತ್ತಿದ್ದ ವೇಳೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಪ್ಪುರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಪುನೀತ್ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ವೈದ್ಯರು ನೀಡಿದ ಹೇಳಿಕೆಯೇ ಅಭಿಮಾನಿಗಳಲ್ಲಿ ಕಳವಳ ಮೂಡಿಸಿತ್ತು. ಇದೀಗ ಕನ್ನಡ ಚಿತ್ರರಂಗದ ಅಪ್ರತಿಮ ನಟ ಅಗಲಿದ್ದಾರೆ ಎಂಬ ವಾರ್ತೆ ನುಂಗಲಾರದ ತುತ್ತಾಗಿದೆ. ಖ್ಯಾತ ನಟನ ನಿಧನಕ್ಕೆ ಇಡೀ ರಾಜ್ಯವೇ ಶೋಕ ಸಾಗರದಲ್ಲಿ ಮುಳುಗಿದೆ.

ಎಲ್ಲವೂ ಅಂದುಕೊಂಡಂತೆ ನಡೆಯುತ್ತಿದ್ದರೆ ಇಂದು ಪುನೀತ್​ ರಾಜ್​ಕುಮಾರ್​ ಗಾಜನೂರಿಗೆ ಭೇಟಿ ನೀಡುವವರಿದ್ದರಂತೆ. ಎರಡು ತಿಂಗಳ ಹಿಂದೆ ಗಾಜನೂರಿಗೆ ಭೇಟಿ ನೀಡಿದ್ದ ಅಪ್ಪು ಸೋದರತ್ತೆ ನಾಗಮ್ಮ ಆರೋಗ್ಯ ವಿಚಾರಿಸಿ ಅಲ್ಲಿಂದ ತೆರಳಿದ್ದರು. ಸೋದರತ್ತೆ ಅನಾರೋಗ್ಯದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಇಂದೂ ಸಹ ಅವರ ಆರೋಗ್ಯ ವಿಚಾರಿಸುವ ಸಲುವಾಗಿ ಗಾಜನೂರಿಗೆ ತೆರಳಲು ಅಪ್ಪು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದ್ದರು ಎನ್ನಲಾಗಿದೆ.

ನಟ ಪುನೀತ್​ ರಾಜ್​ಕುಮಾರ್​ ದಾಖಲಾಗಿದ್ದ ವಿಕ್ರಂ ಆಸ್ಪತ್ರೆ ಎದುರು ಜನಸಾಗರವೇ ನೆರೆದಿದೆ. ಅಪ್ಪು ಅಪ್ಪು ಎಂದು ಕೂಗುತ್ತಿರುವ ಅಭಿಮಾನಿ ಬಳಗ ನೆಚ್ಚಿನ ನಟನ ನಿಧನಕ್ಕೆ ಕಂಬನಿ ಮಿಡಿಯುತ್ತಿದೆ. ಇನ್ನು ಪುನೀತ್​ ಅಂತಿಮ ದರ್ಶನಕ್ಕೆ ಕಂಠೀರವ ಕ್ರೀಡಾಂಗಣದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...