alex Certify ರಾವಣನ ಪಾತ್ರ ರಿಜೆಕ್ಟ್ ಮಾಡಿದ್ರಾ ನಟ ರಾಕಿಂಗ್ ಸ್ಟಾರ್ ಯಶ್ ? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾವಣನ ಪಾತ್ರ ರಿಜೆಕ್ಟ್ ಮಾಡಿದ್ರಾ ನಟ ರಾಕಿಂಗ್ ಸ್ಟಾರ್ ಯಶ್ ?

ನಟ ಪ್ರಭಾಸ್ (Actor Prabhas) ನಟನೆಯ ಆದಿ ಪುರುಷ್ (Adi Purush) ಸಿನಿಮಾ ಬಿಡುಗಡೆಗೆ ಸಿದ್ದವಾಗಿದ್ದು, ಈ ನಡುವೆ ಬಾಲಿವುಡ್ (Bollywood) ನಲ್ಲಿ ಮತ್ತೊಂದು ರಾಮಾಯಣದ ಕತೆ ಹೊತ್ತ ಚಿತ್ರವೊಂದು ತಯಾರಾಗಲು ಸಿದ್ಧತೆ ನಡೆಸಿದೆ. ಈ ಚಿತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್ (Rocking Star Yash) ಸಹ ನಟಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ಆದರೆ ಈ ಚಿತ್ರದಲ್ಲಿ ನಟಿಸುವುದಿಲ್ಲ ಎಂದು ಯಶ್ ಹೇಳಿದ್ದಾರೆ ಎನ್ನಲಾಗಿದೆ.

ಹೌದು, ಚಲನಚಿತ್ರ ನಿರ್ದೇಶಕ ನಿತೇಶ್ ತಿವಾರಿ ರಾಮಾಯಣದ ಬಗ್ಗೆ ಚಿತ್ರ ಮಾಡಲು ಹೊರಟಿದ್ದಾರೆ. ಈ ಚಿತ್ರದಲ್ಲಿ ಯಾವ ನಟರು ಕಾಣಿಸಿಕೊಳ್ಳಲಿದ್ದಾರೆ, ಯಾವ ನಟ ಯಾವ ಪಾತ್ರದಲ್ಲಿ ನಟಿಸಲಿದ್ದಾರೆ, ಈ ಚಿತ್ರವು ಕೆಲವು ದಿನಗಳಿಂದ ಚರ್ಚೆಯಲ್ಲಿದೆ. ಪ್ಯಾನ್ ಇಂಡಿಯಾ ಸೂಪರ್ ಸ್ಟಾರ್ ಮತ್ತು ಕೆಜಿಎಫ್ ಖ್ಯಾತಿಯ ನಟ ಯಶ್ ಅವರು ಈ ಚಿತ್ರದಲ್ಲಿ ರಾವಣನ ಪಾತ್ರದಲ್ಲಿ ನಟಿಸಲಿದ್ದಾರೆ ಎಂದು ಸುದ್ದಿಯಾಗಿತ್ತು. ಆದರೆ ಯಶ್ ಅವರು ಈ ಪಾತ್ರವನ್ನು ಒಪ್ಪಿಕೊಂಡಿಲ್ಲ ಎಂದು ಹೇಳಲಾಗಿದೆ.ನಿತೇಶ್ ತಿವಾರಿ ಅವರ ಚಿತ್ರದಲ್ಲಿ ರಣಬೀರ್ ಕಪೂರ್ ಭಗವಾನ್ ರಾಮನ ಪಾತ್ರದಲ್ಲಿ ಮತ್ತು ಆಲಿಯಾ ಭಟ್ ತಾಯಿ ಸೀತೆಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ,

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...