alex Certify ನಟ ಸಿದ್ದಾಂತ್ ಕಪೂರ್ ಗೆ ಮತ್ತೆ ಸಂಕಷ್ಟ; ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ‘ಸಮನ್ಸ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಟ ಸಿದ್ದಾಂತ್ ಕಪೂರ್ ಗೆ ಮತ್ತೆ ಸಂಕಷ್ಟ; ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ‘ಸಮನ್ಸ್’

ಬಾಲಿವುಡ್ ನಟ ಸಿದ್ಧಾಂತ್ ಕಪೂರ್ ಗೆ ಮತ್ತೆ ಸಂಕಷ್ಟ ಎದುರಾಗಿದೆ. ಡ್ರಗ್ಸ್ ಪಾರ್ಟಿ ನಡೆಸುತ್ತಿದ್ದ ಹೋಟೆಲ್ ಮೇಲೆ ದಾಳಿ ನಡೆಸಿದ ವೇಳೆ ಸಿಕ್ಕಿಬಿದ್ದ ನಟನಿಗೆ ವಿಚಾರಣೆಗೆ ಹಾಜರಾಗುವಂತೆ ಈಗ ಮತ್ತೆ ಸಮನ್ಸ್ ನೀಡಲಾಗಿದೆ.

ಜುಲೈ 12ರಂದು ಬೆಂಗಳೂರಿನ ಹಲಸೂರು ಬಳಿ ಇರುವ ‘ದಿ ಪಾರ್ಕ್’ ಹೋಟೆಲ್ ಮೇಲೆ ದಾಳಿ ನಡೆಸಿದ ವೇಳೆ 38 ವರ್ಷದ ಸಿದ್ಧಾಂತ್ ಕಪೂರ್ ಸೇರಿದಂತೆ ಐವರು ಡ್ರಗ್ಸ್ ಸೇವಿಸಿದ ಸ್ಥಿತಿಯಲ್ಲಿ ಸಿಕ್ಕಿ ಬಿದ್ದಿದ್ದರು.

ಸಿದ್ದಾಂತ್ ಕಪೂರ್ ಈ ಪಾರ್ಟಿಗೆ ಡಿಜೆಯಾಗಿ ಆಗಮಿಸಿದ್ದರೆನ್ನಲಾಗಿದ್ದು, ಸಿಕ್ಕಿಬಿದ್ದ ಐವರನ್ನು ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೊಳಪಡಿಸಿದ್ದ ಪೊಲೀಸರು ಸ್ಟೇಷನ್ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದರು.

ಅಗತ್ಯ ಬಿದ್ದರೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದು, ಇದೀಗ ಸಮನ್ಸ್ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಆಗಸ್ಟ್ 15 ರ ಬಳಿಕ ತಾವು ವಿಚಾರಣೆಗೆ ಹಾಜರಾಗುವುದಾಗಿ ಸಿದ್ದಾಂತ್ ಕಪೂರ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...