ಬೆಂಗಳೂರು: ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣ ಕಾರ್ಯ ಬಹುತೇಕ ಪೂರ್ಣಗೊಳ್ಳುತ್ತಿದ್ದು, ಶೀಘ್ರದಲ್ಲಿಯೇ ಉದ್ಘಾಟನೆ ಮಾಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದರು.
ಬೆಂಗಳೂರಿನ ಜಯನಗರದಲ್ಲಿ ಹಿಂದೆ ವಿಷ್ಣುವರ್ಧನ್ ಅವರಿದ್ದ ಮನೆಯನ್ನೇ ನೂತನವಾಗಿ ನಿರ್ಮಿಸಲಾಗಿದ್ದು, ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ, ವಿಷ್ಣುವರ್ಧನ್ ಓರ್ವ ಮೇರು ನಟ. ಮೈಸೂರಿನಲ್ಲಿ ನಿರ್ಮಾಣ ವಾಗುತ್ತಿರುವ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣ ಪೂರ್ಣ ಗೊಳ್ಳುತ್ತಾ ಬಂದಿದೆ. ಡಿಸೆಂಬರ್ ನಲ್ಲಿ ಸ್ಮಾರಕದ ಉದ್ಘಾಟನೆಯನ್ನು ಅದ್ದೂರಿಯಾಗಿ ಮಾಡಲು ನಿರ್ಧರಿಸಲಾಗಿದೆ ಎಂದರು.
ಇದೇ ವೇಳೆ ಅಡಿಕೆಗೆ ಎಲೆಚುಕ್ಕೆ ರೋಗ ವಿಚಾರವಾಗಿ ಮಾತನಾಡಿದ ಸಿಎಂ, ವಿಜ್ಞಾನಿಗಳ ಸಂಶೋಧನೆ ಒಂದು ಹಂತಕ್ಕೆ ಬಂದಿದೆ. ಅದಕ್ಕೆ ಪರಿಹಾರ ನೀಡುವ ಹಾಗೂ ರೋಗ ಹರಡದಂತೆ ಅನುದಾನ ಬಿಡುಗಡೆಯಾಗಿದೆ. ಮಲೆನಾಡ ಭಾಗದಲ್ಲಿ ಆನೆ ಹಾವಳಿ ಹೆಚ್ಚುತ್ತಿದ್ದು, ನಾಲ್ಕು ಜಿಲ್ಲೆಗಳಲ್ಲಿ ಅರಣ್ಯ ಪಡೆಗಳನ್ನು ರಚಿಸಿ, ವಾಹನ ಸಲಕರಣೆಗೆ ಅನುದಾನ ಬಿಡುಗಡೆ ಮಾಡಲಾಗುತ್ತಿದೆ ಎಂದು ಹೇಳಿದರು.