
ಬೆಂಗಳೂರು: ಚಿಕ್ಕಬಳ್ಳಾಪುರದ ನಂದಿ ಬೆಟ್ಟದ ಬಳಿ ಆದಿ ಯೋಗಿ ಪ್ರತಿಮೆ ಸ್ಥಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳುವ ಆದೇಶವನ್ನು ಹೈಕೋರ್ಟ್ ಮುಂದುವರೆಸಿದೆ.
ಎಸ್. ಕ್ಯಾತಪ್ಪ ಮತ್ತಿತರರು ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಡೆಸಿದ್ದು, ಯಥಾಸ್ಥಿತಿ ಆದೇಶದ ತೆರವಿಗೆ ಇಶಾ ಪ್ರತಿಷ್ಠಾನ ಮನವಿ ಮಾಡಿತು. ಪ್ರತಿಮೆ ಅನಾವರಣಗೊಳಿಸಿದ ದಿನದಂದು ಬೆಂಕಿ ಹಾಕಲಾಗಿದೆ. ಪಟಾಕಿ ಸಿಡಿಸಿ ಪರಿಸರಕ್ಕೆ ಹಾನಿಯಾಗಿದೆ ಎಂದು ಅರ್ಜಿದಾರರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಯಥಾಸ್ಥಿತಿ ಕಾಯ್ದುಕೊಳ್ಳುವ ಆದೇಶ ಮುಂದುವರೆಸಿದ ಹೈಕೋರ್ಟ್ ವಿಚಾರಣೆ ಮುಂದೂಡಿದೆ.