ಚಿಂತಾಮಣಿಯಲ್ಲಿ ಐಟಿಐ ಕಾಲೇಜು ನಿರ್ಮಾಣಕ್ಕೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.
ಐಟಿಐ ಕಾಲೇಜು ನಿರ್ಮಾಣ ಮಾಡಲು ಮಂಜೂರಾಗಿದ್ದ ಜಾಗ ಕಟ್ಟಡ ನಿರ್ಮಾಣ ಮಾಡಲು ಯೋಗ್ಯವಲ್ಲದ ಕಾರಣ ಹೊಸದಾಗಿ ಕನಂಪಲ್ಲಿ ಕೆರೆ ಬಳಿ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರದ ಕಟ್ಟಡ ನಿರ್ಮಾಣಕ್ಕಾಗಿ 2.5 ಎಕರೆ ಜಾಗವನ್ನು ಮಂಜೂರು ಮಾಡಿ ರೂ.3 ಕೋಟಿಯಿಂದ ರೂ.5.5 ಕೋಟಿಗೆ ಅನುದಾನವನ್ನು ಹೆಚ್ಚಿಸಿ ಕಟ್ಟಡ ನಿರ್ಮಾಣಕ್ಕಾಗಿ ಸರ್ಕಾರದಿಂದ ಆಡಳಿತಾತ್ಮಕ ಅನುಮೋದನೆ ದೊರೆತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ ಎಂಸಿ ಸುಧಾಕರ್ ಹೇಳಿದ್ದಾರೆ.