alex Certify ಮಧ್ಯವರ್ತಿ ಮೂಲಕ 3.5 ಲಕ್ಷ ರೂ. ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಎಇಇ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಧ್ಯವರ್ತಿ ಮೂಲಕ 3.5 ಲಕ್ಷ ರೂ. ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಎಇಇ

ಬೆಂಗಳೂರು: ಬೆಂಗಳೂರಿನಲ್ಲಿ ಬೆಸ್ಕಾಂ ಎಇಇ ಧನಂಜಯ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಜಯನಗರ ಬೆಸ್ಕಾಂ ಕಚೇರಿಯಲ್ಲಿ ಲಂಚ ಸ್ವೀಕರಿಸುವಾಗ ಅವರನ್ನು ಬಂಧಿಸಲಾಗಿದೆ.

ಮಧ್ಯವರ್ತಿ ಸೈಯ್ಯದ್ ನದೀಮ್ ಮೂಲಕ ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಎಲೆಕ್ಟ್ರಿಕ್ ಗುತ್ತಿಗೆದಾರ ಭರತ್ ಅವರ ದೂರು ಆಧರಿಸಿ ಲೋಕಾಯುಕ್ತ ದಾಳಿ ನಡೆಸಲಾಗಿದೆ.

22 ಕೆವಿ ವಿದ್ಯುತ್ ಲೈನ್ ಗಾಗಿ 13 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಮುಂಗಡವಾಗಿ 3.5 ಲಕ್ಷ ರೂ. ಲಂಚ ಪಡೆಯುವಾಗ ದಾಳಿ ಮಾಡಿದ ಲೋಕಾಯುಕ್ತ ಪೊಲೀಸರು ಎಇಇ ಧನಂಜಯ ಮತ್ತು ಮಧ್ಯವರ್ತಿ ಸೈಯದ್ ನನ್ನು ಬಂಧಿಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...