alex Certify ಕಾಮದ ಮದದಲ್ಲಿ ದಾರಿ ತಪ್ಪಿದ ಪತ್ನಿ, ಪರ ಸಂಗಕ್ಕೆ ಸುಪಾರಿ ಕೊಟ್ಟು ಪತಿ ಕೊಲ್ಲಿಸಿದ್ಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಮದ ಮದದಲ್ಲಿ ದಾರಿ ತಪ್ಪಿದ ಪತ್ನಿ, ಪರ ಸಂಗಕ್ಕೆ ಸುಪಾರಿ ಕೊಟ್ಟು ಪತಿ ಕೊಲ್ಲಿಸಿದ್ಲು

ಹಾಸನ: ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕಾವಲು ಹೊಸೂರು ಗೇಟ್ ಬಳಿ ಕಳೆದ ವಾರ ನಡೆದಿದ್ದ ಕೊಲೆ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕೊಲೆಯಾದ ವ್ಯಕ್ತಿಯ ಪತ್ನಿ ಮತ್ತು ಪ್ರಿಯಕರನನ್ನು ಬಂಧಿಸಲಾಗಿದೆ. ಜನವರಿ 31 ರಂದು ಸಂಜೆ ಶಾಲೆಯಿಂದ ಮಗನನ್ನು ಕರೆದುಕೊಂಡು ಬರಲು ಬೈಕ್ ನಲ್ಲಿ ತೆರಳುತ್ತಿದ್ದ ಆನಂದಕುಮಾರ್(42) ಅವರನ್ನು ಅಪರಿಚಿತ ದುಷ್ಕರ್ಮಿಗಳು ಅಡ್ಡಗಟ್ಟಿ ಹಲ್ಲೆ ನಡೆಸಿ ಕೊಲೆ ಮಾಡಿದ್ದರು.

ನುಗ್ಗೆಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ತನಿಖೆ ಕೈಗೊಂಡಿದ್ದಾರೆ. ಮೃತನ ಪತ್ನಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ರಹಸ್ಯ ಬಯಲಾಗಿದೆ. ಆನಂದ್ ಕುಮಾರ್ ಪತ್ನಿ ನುಗ್ಗೆಹಳ್ಳಿಯಲ್ಲಿ ಯೋಗ ಕ್ಲಾಸ್ ನಡೆಸುತ್ತಿದ್ದ ನವೀನ್ ಜೊತೆಗೆ ಅಕ್ರಮ ಸಂಬಂಧ ಬೆಳೆಸಿದ್ದಳು. ಈ ವಿಚಾರ ಗಂಡನಿಗೆ ಗೊತ್ತಾದರೆ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತದೆ ಎನ್ನುವ ಕಾರಣಕ್ಕೆ ಸುಪಾರಿ ನೀಡಿ ಕೊಲೆ ಮಾಡಿಸಿದ್ದಾಳೆ. ಬೆಂಗಳೂರಿನವರು ಸುಪಾರಿ ಪಡೆದು ಕೊಲೆ ಮಾಡಿದ್ದಾರೆ. ಈ ಕೃತ್ಯಕ್ಕೆ ಮಹಿಳೆಯ ಪ್ರಿಯಕರ ನವೀನ್ ಕೂಡ ಕೈಜೋಡಿಸಿದ್ದಾನೆ.

2014ರಲ್ಲಿ ಹಿರೀಸಾವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಈಗ ಬಂಧಿತಳಾಗಿರುವ ಮಹಿಳೆಯನ್ನು ಬಂಧಿಸಲಾಗಿತ್ತು. ಸಾಕ್ಷಾಧಾರಗಳ ಕೊರತೆಯಿಂದ ಆಕೆ ಬಿಡುಗಡೆಯಾಗಿದ್ದಳು. ಅದು ಕೂಡ ಅಕ್ರಮ ಸಂಬಂಧದ ಕಾರಣಕ್ಕೆ ನಡೆದ ಕೊಲೆಯಾಗಿತ್ತು ಎನ್ನಲಾಗಿದೆ.

ಈಗ ಯೋಗ ಕ್ಲಾಸ್ ನಡೆಸುತ್ತಿದ್ದ ನವೀನ್ ಜೊತೆಗೆ ಅಕ್ರಮ ಸಂಬಂಧ ಬೆಳೆಸಿದ್ದ ಆನಂದಕುಮಾರ್ ಪತ್ನಿ ಇಬ್ಬರು ಮಕ್ಕಳು, ಕೋಟ್ಯಂತರ ರೂಪಾಯಿ ಆಸ್ತಿ, ಸುಖವಾದ ಸಂಸಾರ ಇದ್ದರೂ ದಾರಿ ತಪ್ಪಿ ಜೈಲು ಸೇರುವಂತಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...