alex Certify ಸಂಬಂಧ ಮುಂದುವರೆಸಲು ನಿರಾಕರಿಸಿದ ಯುವತಿ ಹತ್ಯೆಗೈದ ಪ್ರಿಯಕರ: ತಲೆ ಮೇಲೆ ಕಲ್ಲು ಎತ್ತಿಹಾಕಿ ಪ್ರಿಯಕರನ ಕೊಂದ ಯುವತಿ ತಾಯಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಂಬಂಧ ಮುಂದುವರೆಸಲು ನಿರಾಕರಿಸಿದ ಯುವತಿ ಹತ್ಯೆಗೈದ ಪ್ರಿಯಕರ: ತಲೆ ಮೇಲೆ ಕಲ್ಲು ಎತ್ತಿಹಾಕಿ ಪ್ರಿಯಕರನ ಕೊಂದ ಯುವತಿ ತಾಯಿ

ಬೆಂಗಳೂರು: ಬೆಂಗಳೂರಿನ ಸಾರಕ್ಕಿ ಬಳಿಯ ಪಾರ್ಕ್ ನಲ್ಲಿ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಯಾದ ಸುರೇಶ್(46), ಅನುಷಾ(25) ಇಬ್ಬರೂ ಪರಿಚಿತರಾಗಿದ್ದಾರೆ.

ಗೊರಗುಂಟೆಪಾಳ್ಯ ನಿವಾಸಿ ಸುರೇಶ ಶಾಕಾಂಬರಿ ನಗರದ ನಿವಾಸಿ ಅನುಷಾ ಅವರ ನಡುವೆ ಸಂಬಂಧವಿತ್ತು. ಸುರೇಶನಿಗೆ ಮದುವೆಯಾಗಿದ್ದರೂ ಅನುಷಾ ಸಂಬಂಧ ಹೊಂದಿದ್ದರು. ಆದರೆ, ಅನುಷಾಗೆ ಇತ್ತೀಚೆಗೆ ಸಂಬಂಧ ಮುಂದುವರೆಸುವುದು ಇಷ್ಟ ಇರಲಿಲ್ಲ.

ಬ್ರೇಕ್ ಅಪ್ ಮಾಡಿಕೊಳ್ಳಲು ನಿರ್ಧರಿಸಿದ್ದರು. ಇಂದು ಭೇಟಿಯಾಗಿ ಸಂಬಂಧ ಕಡಿತ ಮಾಡುವ ನಿರ್ಧಾರ ಕೈಗೊಂಡಿದ್ದರು. ಆದರೆ, ಅನುಷಾ ತನ್ನ ಕೈತಪ್ಪಿ ಹೋಗುತ್ತಾಳೆ ಎಂದು ಕೋಪಗೊಂಡಿದ್ದ ಸುರೇಶ ಚಾಕುವಿನಿಂದ ಇರಿದಿದ್ದಾನೆ. ಈ ವೇಳೆ ಅನುಷಾ ತಾಯಿ ಗೀತಾ ತಡೆಯಲು ಮುಂದಾಗಿದ್ದಾರೆ. ಕೊನೆಗೆ ಸಿಮೆಂಟ್ ಇಟ್ಟಿಗೆಯನ್ನು ಸುರೇಶನ ತಲೆ ಮೇಲೆ ಹಾಕಿದ್ದಾರೆ.

ಗಂಭೀರ ಗಾಯಗೊಂಡಿದ್ದ ಸುರೇಶ ಮತ್ತು ಅನುಷಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗೀತಾರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಜೆ.ಪಿ. ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...