alex Certify ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ರೈಲಿಗೆ ತಲೆ ಕೊಟ್ಟ ಪತಿ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ರೈಲಿಗೆ ತಲೆ ಕೊಟ್ಟ ಪತಿ ಆತ್ಮಹತ್ಯೆ

ಬೆಂಗಳೂರು: ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ವ್ಯಕ್ತಿಯೊಬ್ಬ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಸೋಲದೇವನಹಳ್ಳಿ ಬಳಿ ಘಟನೆ ನಡೆದಿದೆ.

ರಮೇಶ್ ಎಂಬುವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿ ಶಿಲ್ಪಾ, ಗೆಳೆಯ ಸಂಜು ಜೊತೆಗಿರುವ ಫೋಟೋ, ಡೆತ್ ನೋಟ್ ಸ್ಟೇಟಸ್ ಹಾಕಿ ರಮೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುಮಾರು 18 ವರ್ಷಗಳ ಹಿಂದೆ ರಮೇಶ್ -ಶಿಲ್ಪಾ ಮದುವೆಯಾಗಿದ್ದರು. ದಂಪತಿಗೆ ಸಂಜು ಫ್ಯಾಮಿಲಿ ಫ್ರೆಂಡ್ ಆಗಿದ್ದು, ಶಿಲ್ಪಾ ಜೊತೆಗೆ ಬಹಳ ಸಲುಗೆಯಿಂದ ಇದ್ದ. ಇತ್ತೀಚೆಗೆ ಸಂಜು ಮೇಲೆ ರಮೇಶ್ ಅನುಮಾನ ಪಡುತ್ತಿದ್ದ. ಇಬ್ಬರ ನಡುವೆ ಅಕ್ರಮ ಸಂಬಂಧವಿದೆ ಎಂದು ಅನುಮಾನದಿಂದ ರಮೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಕ್ರಮ ಸಂಬಂಧದ ಬಗ್ಗೆ ಪತ್ನಿಯನ್ನು ಕೇಳಿದರೆ ಪ್ರತಿದಿನ ಜಗಳವಾಗುತ್ತಿತ್ತು. ಶಿಲ್ಪಾ ಮತ್ತು ಸಂಜುಗೆ ಶಿಕ್ಷೆ ಆಗಬೇಕೆಂದು ಡೆತ್ ನೋಟ್ ಬರೆದು ರಮೇಶ್ ಸೋಲದೇವನಹಳ್ಳಿ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್  ದಾಖಲಿಸಿಕೊಂಡಿದ್ದು, ತನಿಖೆ ಕೈಗೊಳ್ಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Jak se Jak teplota vody Proč semena papriky neklíčí a jak Vědci objevili nejzdravější sacharidy Vepřový jazyk: Tajemství přípravy lahodné lahůdky Odborník na výživu přináší