alex Certify ಮಹಾತ್ಮ ಗಾಂಧಿಯವರ ಬಳಿಕ ಜನರ ಭಾವನೆಗಳನ್ನು ಅರ್ಥ ಮಾಡಿಕೊಂಡ ಏಕೈಕ ನಾಯಕನೆಂದರೆ ಅದು ಮೋದಿ ಮಾತ್ರ; ಪ್ರಧಾನಿಯನ್ನು ಹಾಡಿ ಹೊಗಳಿದ ರಾಜನಾಥ್ ಸಿಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಾತ್ಮ ಗಾಂಧಿಯವರ ಬಳಿಕ ಜನರ ಭಾವನೆಗಳನ್ನು ಅರ್ಥ ಮಾಡಿಕೊಂಡ ಏಕೈಕ ನಾಯಕನೆಂದರೆ ಅದು ಮೋದಿ ಮಾತ್ರ; ಪ್ರಧಾನಿಯನ್ನು ಹಾಡಿ ಹೊಗಳಿದ ರಾಜನಾಥ್ ಸಿಂಗ್

ಮಹಾತ್ಮ ಗಾಂಧಿಯವರ ಬಳಿಕ ಜನರ ಭಾವನೆಗಳನ್ನು ಅರ್ಥ ಮಾಡಿಕೊಂಡು ಸ್ಪಂದಿಸಿದ ಏಕೈಕ ನಾಯಕ ಅಂದರೆ ಅದು ನರೇಂದ್ರ ಮೋದಿಯವರು ಮಾತ್ರ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಡಿ ಹೊಗಳಿದ್ದಾರೆ.

ನವದೆಹಲಿಯಲ್ಲಿ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿಯವರು ಜನರೊಂದಿಗೆ ನೇರ ಸಂಪರ್ಕದಲ್ಲಿ ಇರುತ್ತಾರೆ. ಇದರಿಂದಾಗಿ ಜನರು ಕೂಡ ಅವರ ಮೇಲೆ ನಂಬಿಕೆ ಹಾಗೂ ವಿಶ್ವಾಸ ಹೊಂದಿದ್ದಾರೆ ಎಂದು ರಾಜನಾಥ್ ಸಿಂಗ್ ಹೇಳಿದರು.

ನರೇಂದ್ರ ಮೋದಿಯವರು ಈಗ ಭಾರತದಲ್ಲಿ ಮಾತ್ರವಲ್ಲ ವಿಶ್ವಮಟ್ಟದಲ್ಲೂ ಜನಪ್ರಿಯ ನಾಯಕರಾಗಿ ಹೊರಹೊಮ್ಮಿದ್ದಾರೆ. ಈ ಕುರಿತಂತೆ ಈಗಾಗಲೇ ಹಲವು ಸಮೀಕ್ಷೆಗಳು ಈ ವಿಚಾರವನ್ನು ಹೇಳಿವೆ. ನರೇಂದ್ರ ಮೋದಿಯವರು ದೀರ್ಘಕಾಲ ಅಧಿಕಾರದಲ್ಲಿದ್ದರೂ ಸಹ ಜನರು ಅವರ ಮೇಲೆ ಈಗಲೂ ನಂಬಿಕೆ ಇಟ್ಟಿದ್ದಾರೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...