alex Certify ಯಶ್ ಫ್ಯಾನ್ಸ್ ದುರಂತ ಸಾವಿನ ಬಳಿಕ ಅಭಿಮಾನಿಗಳಿಗೆ ನಟ ‘ದುನಿಯಾ ವಿಜಯ್’ ವಿಶೇಷ ಮನವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯಶ್ ಫ್ಯಾನ್ಸ್ ದುರಂತ ಸಾವಿನ ಬಳಿಕ ಅಭಿಮಾನಿಗಳಿಗೆ ನಟ ‘ದುನಿಯಾ ವಿಜಯ್’ ವಿಶೇಷ ಮನವಿ

ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ಅವರ ಬರ್ತಡೇ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿತ್ತು. ಹುಟ್ಟು ಹಬ್ಬದ ವೇಳೆ ನಡೆದ ಈ ದುರಂತಕ್ಕೆ ನಟ ಯಶ್ ಮರುಗಿದ್ದರು . ಕೂಡಲೇ ಶೂಟಿಂಗ್ ಸ್ಥಗಿತಗೊಳಿಸಿ ಗ್ರಾಮಕ್ಕೆ ಬಂದು ಮೃತಪಟ್ಟ ಅಭಿಮಾನಿಗಳ ಕುಟುಂಬಕ್ಕೆ ಸಾಂತ್ವನ ಹೇಳಿದ್ದರು.

ಈ ಬಳಿಕ ನಟ ದುನಿಯಾ ವಿಜಯ್ ಅಭಿಮಾನಿಗಳಿಗೆ ವಿಶೇಷ ಮನವಿ ಮಾಡಿದ್ದಾರೆ. ಈ ಬಾರಿ ವಿಜಯ್ ತನ್ನ ಹುಟ್ಟೂರಾದ ಕುಂಬಾರನಹಳ್ಳಿಯಲ್ಲಿ  ಜನವರಿ 20 ರಂದು  ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ. ಈ ಹಿನ್ನೆಲೆ ಮಾತನಾಡಿದ ದುನಿಯಾ ವಿಜಯ್ ನಿಮಗೆ ಕೈ ಮುಗಿದು ಕೇಳಿಕೊಳ್ಳುತ್ತೇನೆ, ಯಾರು ನನ್ನ ಹುಟ್ಟುಹಬ್ಬದ ದಿನ ಫ್ಲೆಕ್ಸ್ ಬ್ಯಾನರ್ ಹಾಕಬೇಡಿ… ಯಾರೂ ಕೂಡ ಈ ಬಾರಿ ನಡೆದುಕೊಂಡು ಬರಬೇಡಿ, ಕೇಕ್ ಮತ್ತು ಹೂವಿನ ಹಾರ ತರಬೇಡಿ. ನನಗೆ ನಿಮ್ಮ ಜೊತೆಗೆ ಕುಳಿತು ಪ್ರೀತಿಯಿಂದ ಊಟ ಮಾಡುವ ಆಸೆಯಿದೆ ಎಂದು ಹೇಳಿದ್ದಾರೆ.

ಈ ಬಾರಿ ವಿಜಯ್ ತನ್ನ ಹುಟ್ಟೂರಾದ ಕುಂಬಾರನಹಳ್ಳಿಯಲ್ಲಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದು, ಅಲ್ಲಿಯೇ ಅಭಿಮಾನಿಗಳನ್ನು ಭೇಟಿಯಾಗಲಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...