alex Certify ಬಿಜೆಪಿ ಕಾರ್ಯಕರ್ತರಿಂದಲೇ ಪಕ್ಷದ ಕಚೇರಿ ಧ್ವಂಸ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಕಾರ್ಯಕರ್ತರಿಂದಲೇ ಪಕ್ಷದ ಕಚೇರಿ ಧ್ವಂಸ

ರಾಜಸ್ಥಾನದ ರಾಜಸಮಂದ್ ಕ್ಷೇತ್ರದಲ್ಲಿ ಆಕ್ರೋಶಗೊಂಡ ಬಿಜೆಪಿ ಕಾರ್ಯಕರ್ತರು ಪಕ್ಷದ ಕಚೇರಿಯನ್ನು ಧ್ವಂಸಗೊಳಿಸಿದ್ದಾರೆ.

ವಿಧಾನಸಭಾ ಚುನಾವಣೆಯ ಟಿಕೆಟ್ ಹಂಚಿಕೆಯ ಬಗ್ಗೆ ಭಿನ್ನಮತೀಯ ನಾಯಕರ ಬೆಂಬಲಿಗರು ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿರುವುದರಿಂದ ರಾಜಸ್ಥಾನದಲ್ಲಿ ಬಿಜೆಪಿಗೆ ಆಂತರಿಕ ಸವಾಲು ಎದುರಾಗಿದೆ. ರಾಜ್ಯದ ವಿವಿಧ ಪ್ರದೇಶಗಳಲ್ಲಿ ವ್ಯಾಪಕ ಪ್ರತಿಭಟನೆ ವ್ಯಕ್ತವಾಗಿದೆ.

ರಾಜ್‌ಸಮಂದ್ ಜಿಲ್ಲೆಯಲ್ಲಿ, ಬಿಜೆಪಿ ಅತೃಪ್ತರ ಬೆಂಬಲಿಗರು ಪಕ್ಷದ ಕಚೇರಿಯಲ್ಲಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿದರು. ಪ್ರಚಾರಕ್ಕೆ ಸಂಬಂಧಿಸಿದ ವಸ್ತುಗಳನ್ನು ಸುಟ್ಟು ಹಾಕಿದರು, ಜೊತೆಗೆ ಟೈರ್‌ಗಳನ್ನು ಸುಟ್ಟಿದ್ದಾರೆ.

ದೀಪ್ತಿ ಮಹೇಶ್ವರಿ ಅವರನ್ನು ಚುನಾವಣಾ ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವುದರ ವಿರುದ್ಧ ಉಳಿದ ಆಕಾಂಕ್ಷಿಗಳ ಬೆಂಬಲಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಘಟನೆಗಳಿಗೆ ಸಂಬಂಧಿಸಿದಂತೆ ಯಾವುದೇ ಔಪಚಾರಿಕ ಪ್ರಕರಣ ದಾಖಲಾಗಿಲ್ಲ ಎಂದು ಸ್ಥಳೀಯ ಪೊಲೀಸರು ಖಚಿತಪಡಿಸಿದ್ದಾರೆ.

ಬಿಜೆಪಿಯ ರಾಜ್ಯ ಶಿಸ್ತು ಸಮಿತಿಯು ಈ ಅಶಿಸ್ತಿನ ಕೃತ್ಯಗಳಿಗೆ ಕ್ಷಿಪ್ರವಾಗಿ ಪ್ರತಿಕ್ರಿಯಿಸಿದ್ದು, ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ನಾಲ್ವರು ಸದಸ್ಯರನ್ನು ಅಮಾನತುಗೊಳಿಸಿದೆ.

ಟಿಕೆಟ್ ಹಂಚಿಕೆ ವಿರುದ್ಧದ ಪ್ರತಿಭಟನೆಗಳು ಕೇವಲ ರಾಜಸಮಂದ್‌ಗೆ ಸೀಮಿತವಾಗಿಲ್ಲ. ಚಿತ್ತೋರ್‌ಗಢ್, ಉದಯಪುರ, ಕೋಟಾ, ಜೈಪುರ, ಅಲ್ವಾರ್ ಮತ್ತು ಬುಂಡಿಯಲ್ಲಿ ಭಿನ್ನಮತೀಯ ಬೆಂಬಲಿಗರು ಬೀದಿಗಿಳಿದರು, ಅಲ್ಲಿ ಅವರು ಪಕ್ಷದ ಅಭ್ಯರ್ಥಿಗಳ ಆಯ್ಕೆಗೆ ವಿರೋಧ ವ್ಯಕ್ತಪಡಿಸಿ ಪ್ರತಿಕೃತಿಗಳನ್ನು ಸುಟ್ಟುಹಾಕಿದರು.

ರಾಜ್‌ಸಮಂದ್‌ನಲ್ಲಿ ದಿನೇಶ್ ಬಡಾಲಾ, ಗಣೇಶ್ ಪಲಿವಾಲ್ ಮತ್ತು ಮಹೇಂದ್ರ ಕೊಠಾರಿ ಸೇರಿದಂತೆ ಸ್ಥಳೀಯ ಬಿಜೆಪಿ ಸ್ಪರ್ಧಿಗಳ ಗುಂಪು ಮತ್ತು ಅವರ ಬೆಂಬಲಿಗರು ಪಕ್ಷದ ಕಚೇರಿಗೆ ಪ್ರವೇಶಿಸಿದ್ದರಿಂದ ಅಸಮಾಧಾನ ವ್ಯಕ್ತವಾಗಿದೆ. ಪ್ರತಿಭಟನಾಕಾರರು ಅಭ್ಯರ್ಥಿ ದೀಪ್ತಿ ಮಹೇಶ್ವರಿ ವಿರುದ್ಧ ಘೋಷಣೆಗಳನ್ನು ಕೂಗಿ ಕಚೇರಿಯ ಪೀಠೋಪಕರಣಗಳಿಗೆ ಹಾನಿ ಮಾಡಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...