alex Certify BIG NEWS: ರಾಜ್ಯದ ಕೆಲವು ರಾಜಕಾರಣಿಗಳು ಈಗಲೂ ನರಬಲಿ ಕೊಡ್ತಾರೆ; ನಿರ್ದೇಶಕ ಅಗ್ನಿಶ್ರೀಧರ್ ಗಂಭೀರ ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದ ಕೆಲವು ರಾಜಕಾರಣಿಗಳು ಈಗಲೂ ನರಬಲಿ ಕೊಡ್ತಾರೆ; ನಿರ್ದೇಶಕ ಅಗ್ನಿಶ್ರೀಧರ್ ಗಂಭೀರ ಆರೋಪ

ಬೆಂಗಳೂರು: ರಾಜ್ಯದಲ್ಲಿ ನರಬಲಿ ಪದ್ಧತಿ ಇನ್ನೂ ಇದೆ. ಹೆಣ್ಣುಮಕ್ಕಳ ಬಲಿ, ನರಬಲಿ ಈಗಲೂ ನಡೆಯುತ್ತಿದೆ. ಕಾಮಾಕ್ಯದಿಂದ ಕೇರಳದವರೆಗೂ ನರಬಲಿ ನಡೆಯುತ್ತದೆ ಎಂದು ನಿರ್ದೇಶಕ ಅಗ್ನಿ ಶ್ರೀಧರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಗ್ನಿಶ್ರೀಧರ್, ರಾಜ್ಯದ ಕೆಲ ರಾಜಕಾರಣಿಗಳು ಇಂದಿಗೂ ನರಬಲಿ ಕೊಡುತ್ತಾರೆ. ಆದರೆ ಅವರು ಇದರಲ್ಲಿ ನೇರವಾಗಿ ಭಾಗಿಯಾಗಲ್ಲ ಎಂದು ಗಂಭೀರವಾಗಿ ಆರೋಪಿಸಿದ್ದಾರೆ.

ಬಡ ಮಕ್ಕಳನ್ನು, ಒಂಟಿ ಹೆಣ್ಣುಮಕ್ಕಳನ್ನು ಹಾಗೂ ಭಿಕ್ಷುಕರನ್ನು ಈ ಕೃತ್ಯಕ್ಕೆ ಬಳಸಿಕೊಳ್ಳುತ್ತಾರೆ. ಕರ್ನಾಟಕದ ಹಲವು ರಾಜಕಾರಣಿಗಳು ನರಬಲಿ ಕೊಡುತ್ತಾರೆ ಎಂದಿದ್ದಾರೆ.

ದಂಡುಪಾಳ್ಯ ಸಿನಿಮಾ ಮೇಲೆ ಕೊಲೆ ಆರೋಪ ಮಾಡಿದರು. ಆದರೆ ದಂಡುಪಾಳ್ಯ ಗ್ಯಾಂಗ್ ಆ ಕೊಲೆಗಳನ್ನು ಮಾಡಿರಲಿಲ್ಲ. ದಂಡುಪಾಳ್ಯ ಸಿನಿಮಾದಲ್ಲಿ ತೋರಿಸಿರುವ ಅಂಶಗಳು ನೈಜವಲ್ಲ. ಕ್ರೀಂ ಸಿನಿಮಾದ ಕಥೆ ನರಬಲಿಗೆ ಸಂಬಂಧಿಸಿದೆ ಎಂದು ಹೇಳಿದರು.

ಕ್ರೀಂ ಚಿತ್ರದಲ್ಲಿ ಅಗ್ನಿಶ್ರೀಧರ್ ಕೂಡ ನಟಿಸಿದ್ದಾರೆ. ಅಭಿಷೇಕ್ ಬಸಂತ್ ನಿರ್ದೇಶನದ ಚಿತ್ರದಲ್ಲಿ ಸಂಯುಕ್ತಾ ಹೆಗ್ಡೆ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಭಾರತದಲ್ಲಿ ಪ್ರತಿ ವರ್ಷ ಎರಡುವರೆ ಸಾವಿರ ಮಹಿಳೆಯರು ನಾನಾಕಾರಣಗಳಿಂದ ಬಲಿಯಾಗುತ್ತಾರೆ. ಅದಕ್ಕೆ ಕಾರಣವೇನು ಎಂಬುದನ್ನು ತಿಳಿಸುವ ಕಥೆ ಕೂಡ ಕ್ರೀಂ ಚಿತ್ರದಲ್ಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...