alex Certify ಜಮೀನಿನಲ್ಲಿ ಇದ್ದಕ್ಕಿದ್ದಂತೆ ಸೃಷ್ಟಿಯಾದ ಬೃಹತ್ ಹೊಂಡ; ಗುಂಡಿಯಿಂದ ಹೊರ ಬರುತ್ತಿದೆ ಬಿಸಿ ಶಾಖ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಮೀನಿನಲ್ಲಿ ಇದ್ದಕ್ಕಿದ್ದಂತೆ ಸೃಷ್ಟಿಯಾದ ಬೃಹತ್ ಹೊಂಡ; ಗುಂಡಿಯಿಂದ ಹೊರ ಬರುತ್ತಿದೆ ಬಿಸಿ ಶಾಖ

ಚೆನ್ನೈ: ರೈತರೊಬ್ಬರ ಕೃಷಿ ಭೂಮಿಯಲ್ಲಿ ಇದ್ದಕ್ಕಿದ್ದಂತೆ ಬೃಹತ್ ಹೊಂಡವೊಂದು ನಿರ್ಮಾಣವಾಗಿದ್ದು, ಈ ಹೊಂಡದಿಂದ ಬಿಸಿ ಶಾಖ ಹೊರಬರುತ್ತಿರವ ಆತಂಕಕಾರಿ ಘಟನೆ ತಮಿಳುನಾಡಿನ ತಿರುಪತ್ತೂರಿನಲ್ಲಿ ನಡೆದಿದೆ.

ತಿರುಪತ್ತೂರಿನ ಆಚಮಂಗಲಂ ಗ್ರಾಮದ ವ್ಯಕ್ತಿಯೊಬ್ಬರ ಕೃಷಿ ಭೂಮಿಯಲ್ಲಿ ಈ ಘಟನೆ ನಡೆದಿದೆ. ಕೃಷಿ ಭೂಮಿಯಲ್ಲಿ ಏಕಾಏಕಿ ಸೃಷ್ಟಿಯಾಗಿರುವ ಐದು ಅಡಿ ಆಳದ ಗುಂಡಿಯಿಂದ ಬಿಸಿ ಹೊರಬರುತ್ತಿದ್ದು, ಕಂಗಾಲಾಗಿರುವ ಕೃಷಿಕ ಪೊಲೀಸರು ಹಾಗೂ ಜಿಲ್ಲಾಧಿಕಾರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿರುವ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಹೊಂಡದ ಆಳದ ಕೆಲ ಮಾದರಿಗಳನ್ನು ಸಂಗ್ರಹಿಸಿ ವೆಲ್ಲೂರು ಹಾಗೂ ಚೆನ್ನೈ ಪ್ರಯೋಗಾಲಯಕ್ಕೆ ರವಾನಿಸಿದ್ದಾರೆ.

ರಂಧ್ರ ಹಾಗೂ ಸುತ್ತಮುತ್ತಲಿನ ಸ್ಥಳದಲ್ಲಿದ್ದ ಮಾದರಿ ಸಂಗ್ರಹಿಸಿದ್ದು, ಇದು ನೆಲಕ್ಕೆ ಅಪ್ಪಳಿಸಿರುವ ಉಲ್ಕಾಶಿಲೆ. ಇದು ಮಂಗಳ ಮತ್ತು ಗುರು ಗ್ರಹಗಳ ನಡುವಿನ ಕ್ಷುದ್ರಗ್ರಹ ಸಾಲಿನಿಂದ ಇಲ್ಲಿಗೆ ಬಿದ್ದಿರುವ ಸಾಧ್ಯತೆ ಇದೆ ಎಂದು ಜಿಲ್ಲಾ ವಿಜ್ಞಾನ ಅಧಿಕಾರಿ ರವಿ ತಿಳಿಸಿದ್ದಾರೆ. ಹೆಚ್ಚಿನ ಪರಿಶೀಲನೆಗಾಗಿ ಮಾದರಿಗಳನ್ನು ಅಹಮದಾಬಾದ್ ಗೂ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...