alex Certify ಕಾರ್ಮಿಕರು, ರೈತರಿಗೆ ಗುಡ್ ನ್ಯೂಸ್: ಕೃಷಿ ಚಟುವಟಿಕೆಗೆ ಗ್ರೀನ್ ಪಾಸ್- ಕಟ್ಟಡ ಕಾರ್ಮಿಕರಿಗೆ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರ್ಮಿಕರು, ರೈತರಿಗೆ ಗುಡ್ ನ್ಯೂಸ್: ಕೃಷಿ ಚಟುವಟಿಕೆಗೆ ಗ್ರೀನ್ ಪಾಸ್- ಕಟ್ಟಡ ಕಾರ್ಮಿಕರಿಗೆ ಅವಕಾಶ

ಬೆಂಗಳೂರು: ಮೇ. 12 ರವರೆಗೆ ಕಠಿಣ ನಿರ್ಬಂಧ ಜಾರಿಯಾಗಿರುವುದರಿಂದ ರೈತರಿಗೆ ಕೃಷಿ ಚಟುವಟಿಕೆ, ಕೃಷಿ ಪರಿಕರಗಳ ಲಭ್ಯತೆ ವಿಷಯದಲ್ಲಿ ಯಾವುದೇ ರೀತಿಯ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗಿದೆ.

ಅಗತ್ಯ ವಸ್ತುಗಳ ಸೇವೆಯಡಿ ಕೃಷಿ ಪರಿಕರಗಳಾದ ಬಿತ್ತನೆಬೀಜ, ಗೊಬ್ಬರ, ಪೀಡೆನಾಶಕ, ಕೃಷಿ ಯಂತ್ರೋಪಕರಣಗಳು ಸೇರಿರುವುದರಿಂದ, ರೈತ ಸಂಪರ್ಕ ಕೇಂದ್ರಗಳು, ಕೃಷಿ ಯಂತ್ರಧಾರೆ ಕೇಂದ್ರಗಳಲ್ಲಿ ಸುರಕ್ಷಿತಾ ಕ್ರಮಗಳನ್ನು ಪಾಲಿಸಿ, ಅಗತ್ಯ ಪರಿಕರ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ.  ಕೃಷಿ ಪರಿಕರ ವಿತರಣೆಗಾಗಿ ಗ್ರೀನ್ ಪಾಸ್ (ಅನುಮತಿ ಪತ್ರ ) ಗಳನ್ನು ಅಗತ್ಯವಿದ್ದಲ್ಲಿ ಅಧಿಕೃತ ಮಾರಾಟಗಾರರು, ವಿತರಕರಿಗೆ ನೀಡಲು ಕ್ರಮ ಕೈಗೊಳ್ಳಲಾಗಿದೆ.  ಸರ್ಕಾರ ನೀಡಿರುವ ಸೂಚನೆಗಳು ಹಾಗೂ ಸುರಕ್ಷಿತಾ ಕ್ರಮಗಳನ್ನು ಉಲ್ಲಂಘಿಸುವ ಮಾರಾಟಗಾರರು, ವಿತರಕರ ಪರವಾನಗಿ ಅಮಾನತುಗೊಳಿಸುವುದು ಅಥವಾ ರದ್ದುಗೊಳಿಸಲು ಕ್ರಮ ವಹಿಸಲಾಗುವುದು ಎಂದು ಹೇಳಲಾಗಿದೆ.

ಮೇ. 12 ರವರೆಗಿನ ನಿರ್ಬಂಧಿತ ಅವಧಿಯಲ್ಲಿ ಕಟ್ಟಡ ಕಾರ್ಮಿಕರು, ಸರ್ಕಾರಿ ರಸ್ತೆ, ಕಟ್ಟಡ ನಿರ್ಮಾಣದಲ್ಲಿ ತೊಡಗಿರುವ ಕಾರ್ಮಿಕರು ತಮ್ಮ ಕೆಲಸ ನಿರ್ವಹಿಸಲು ಅವಕಾಶ ಕಲ್ಪಿಸಿಕೊಡಲಾಗುವುದು.  ಅಂತಹ ಕಾರ್ಮಿಕರು ಕಟ್ಟಡ ಕಾಮಗಾರಿಗೆ ಸಂಬಂಧಪಟ್ಟ ಪ್ರಾಧಿಕಾರದಿಂದ ಪಡೆದಿರುವ ಅನುಮತಿ ಪತ್ರದ ದಾಖಲೆ ಪ್ರತಿ ಹೊಂದಿರಬೇಕು.

ಸರ್ಕಾರಿ ರಸ್ತೆ, ಕಟ್ಟಡ ಕಾಮಗಾರಿಯಲ್ಲಿ ತೊಡಗಿರುವ ಕಾರ್ಮಿಕರು, ಆಯಾ ಕಾಮಗಾರಿ ಟೆಂಡರ್ ಗುತ್ತಿಗೆ ಪಡೆದಿರುವವರು ಹೊಂದಿರುವ ಕಾರ್ಯಾದೇಶ ಪತ್ರದ ಪ್ರತಿ ದಾಖಲೆ ತೋರಿಸಿದಲ್ಲಿ ಕಾರ್ಮಿಕರ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗುವುದು.

ವಿದೇಶಕ್ಕೆ ಅಥವಾ ಬೇರೆ ರಾಜ್ಯಗಳಿಗೆ ಪ್ರಯಾಣಿಸುವವರು ಸಂಬಂಧಪಟ್ಟ ಟಿಕೇಟ್ ಹೊಂದಿರಬೇಕು.  ಮೆಡಿಕಲ್, ಇಂಜಿನಿಯರಿಂಗ್ ಮತ್ತಿತರ ವೃತ್ತಿಪರ ಕಾಲೇಜುಗಳ ಬೊಧಕರು ಆನ್‍ಲೈನ್‍ನಲ್ಲಿ ಪಾಠ ಮಾಡುವ ಸಲುವಾಗಿ ಕಾಲೇಜುಗಳಿಗೆ ತೆರಳಲು ಅವಕಾಶ ಕಲ್ಪಿಸಲಾಗುವುದು, ಇದಕ್ಕಾಗಿ ಅವರು ಸಂಬಂಧಪಟ್ಟ ಸಂಸ್ಥೆಯಿಂದ ಪಡೆದಿರುವ ಅನುಮತಿ ಮತ್ತು ಗುರುತಿನ ಪತ್ರವನ್ನು ತೋರಿಸಬೇಕಾಗುತ್ತದೆ.

ಕೋವಿಡ್ ಗೆ ಸಂಬಂಧಿಸಿದಂತೆ ಈ ಬಾರಿ ಯಾವುದೇ ಪಾಸ್ ನೀಡುವ ವ್ಯವಸ್ಥೆ ಇರುವುದಿಲ್ಲ.  ಆಸ್ಪತ್ರೆ, ಕಾರ್ಖಾನೆ ಮತ್ತಿತರ ಸೇವೆಗೆ ಅಡ್ಡಿ ಇರುವುದಿಲ್ಲ.  ಎಪಿಎಂಸಿ ವ್ಯಾಪ್ತಿಯಲ್ಲಿ ಟ್ರೇಡಿಂಗ್ ಲೋಡಿಂಗ್, ಅನ್‍ಲೋಡಿಂಗ್ಗೆ ಅವಕಾಶ ಕಲ್ಪಿಸಲಾಗುವುದು.  ಅನಾವಶ್ಯಕವಾಗಿ ಓಡಾಟ ಮಾಡುವವರು, ವಾಹನಗಳಲ್ಲಿ ಸಂಚರಿಸುವವರ ವಿರುದ್ಧ ಕರ್ನಾಟಕ ಸಾಂಕ್ರಾಮಿಕ ರೋಗ ನಿರ್ವಹಣಾ ಕಾಯ್ದೆಯನ್ವಯ ಕಾನೂನು ಕ್ರಮ ಜರುಗಿಸಲಾಗುವುದು.  ಸಾರ್ವಜನಿಕರು ಇಂತಹ ಕ್ರಮಕ್ಕೆ ಅವಕಾಶ ನೀಡದೆ, ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯನ್ನು ಪಾಲಿಸುವ ಮೂಲಕ ಕೋವಿಡ್ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...