alex Certify ಬಾಂಬ್ ಇರುವುದಾಗಿ ಬೆದರಿಕೆ, ಕೆಂಪೇಗೌಡ ಏರ್ಪೋರ್ಟ್ ರನ್ ವೇ ಬಳಿಯೇ ವಿಮಾನ ನಿಲ್ಲಿಸಿ ಪರಿಶೀಲನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಾಂಬ್ ಇರುವುದಾಗಿ ಬೆದರಿಕೆ, ಕೆಂಪೇಗೌಡ ಏರ್ಪೋರ್ಟ್ ರನ್ ವೇ ಬಳಿಯೇ ವಿಮಾನ ನಿಲ್ಲಿಸಿ ಪರಿಶೀಲನೆ

ಬೆಂಗಳೂರು: ವಿಮಾನದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ ಬಂದಿದ್ದು, ಕೆಂಪೇಗೌಡ ಅಂತರಾಷ್ಟ್ರೀಯ ಏರ್ಪೋರ್ಟ್ ನಲ್ಲಿ ಆತಂಕದ ವಾತಾವರಣ ಉಂಟಾಗಿದೆ. ಬೆದರಿಕೆ ಕರೆ ಹಿನ್ನೆಲೆಯಲ್ಲಿ ವಿಮಾನದಲ್ಲಿ ತೀವ್ರ ತಪಾಸಣೆ ಕೈಗೊಳ್ಳಲಾಗಿದೆ.

ಮಸ್ಕಟ್ ನಗರದಿಂದ ಬೆಂಗಳೂರಿಗೆ ಆಗಮಿಸಿದ್ದ ವಿಮಾನದಲ್ಲಿ ಏರ್ಪೋರ್ಟ್ ಭದ್ರತಾ ಪಡೆ ಮತ್ತು ಶ್ವಾನದಳದಿಂದ ತಪಾಸಣೆ ನಡೆಸಲಾಗಿದೆ. ರನ್ ವೇ ಬಳಿ ವಿಮಾನವನ್ನು ನಿಲ್ಲಿಸಿ, ಎಲ್ಲ ಪ್ರಯಾಣಿಕರನ್ನು ಕೆಳಗಿಳಿಸಿ ವಿಮಾನದಲ್ಲಿ ಪರಿಶೀಲನೆ ನಡೆಸಲಾಗಿದೆ. ತೀವ್ರ ತಪಾಸಣೆ ನಡೆಸಲಾಗಿದೆ.

ವಿಮಾನದಲ್ಲಿ ಎರಡು ಅನಾಮಧೇಯ ಬ್ಯಾಗ್ ಗಳು ಇರುವ ಬಗ್ಗೆ ಮಾಹಿತಿ ಇದ್ದು, ಭದ್ರತಾ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...