alex Certify ಸಾಲು ಸಾಲಿನ ಸೋಲಿನ ನಂತರ ಅಕ್ಷಯ್‌ ಹೊಸ ಚಿತ್ರದ ಟೀಸರ್​ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಲು ಸಾಲಿನ ಸೋಲಿನ ನಂತರ ಅಕ್ಷಯ್‌ ಹೊಸ ಚಿತ್ರದ ಟೀಸರ್​ ರಿಲೀಸ್

ಮುಂಬೈ: ಬಾಲಿವುಡ್​ ನಟ ಅಕ್ಷಯ್ ಕುಮಾರ್​ ನಟಿಸಿರುವ ಯಾವ ಸಿನಿಮಾಗಳೂ 2022ರಲ್ಲಿ ಸಕ್ಸಸ್ ಆಗಲಿಲ್ಲ. ಈ ಹಿನ್ನೆಲೆಯಲ್ಲಿ ಪ್ರೇಕ್ಷಕರನ್ನು ಸೆಳೆಯಲು ಅವರು ಮೊದಲ ಬಾರಿಗೆ ಮರಾಠಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂ​ಗ್​ ಆರಂಭ ಆಗಿದೆ.

ನಿರ್ದೇಶಕ ಮಹೇಶ್ ಮಂಜ್ರೇಕರ್ ಅವರ ಮರಾಠಿ ಸಿನಿಮಾ ‘ವೇದತ್ ಮರಾಠೆ ವೀರ್ ದೌಡ್ಲೆ ಸಾತ್’ ಚಿತ್ರದಲ್ಲಿ ಅಕ್ಷಯ್ ಛತ್ರಪತಿ ಶಿವಾಜಿ ಮಹಾರಾಜ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಚಿತ್ರೀಕರಣದ ಮೊದಲ ಭಾಗ ಈಗಾಗಲೇ ಮುಂಬೈನಲ್ಲಿ ಪ್ರಾರಂಭವಾಗಿದೆ.

ಚಿತ್ರ ತಂಡ ಫಸ್ಟ್ ಲುಕ್ ಟೀಸರ್ ಅನ್ನು ಹಂಚಿಕೊಂಡಿದೆ. ಚಿತ್ರದ ಚಿತ್ರೀಕರಣದ ಕುರಿತಾಗಿ ಮಾಹಿತಿ ಹಂಚಿಕೊಂಡಿರುವ ಅಕ್ಷಯ್ ಕುಮಾರ್ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಚಿತ್ರೀಕರಣ ಹಾಗೂ ತಮ್ಮ ಪಾತ್ರದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಛತ್ರಪತಿ ಶಿವಾಜಿ ಮಹಾರಾಜ್ ಪಾತ್ರದಲ್ಲಿ ಅಭಿನಯಿಸಲು ದೊರೆತಿರುವುದು ನನ್ನ ಅದೃಷ್ಟ ಎಂದು ತಿಳಿಸಿದ್ದಾರೆ. ನನ್ನ ಕನಸು ನನಸಾಗುವ ಸಮಯ ಇದಾಗಿದೆ. ಛತ್ರಪತಿ ಶಿವಾಜಿ ಮಹಾರಾಜರ ಪಾತ್ರವನ್ನು ಹಿರಿತೆರೆಯಲ್ಲಿ ಚಿತ್ರಿಸುವುದು ಬಹಳ ದೊಡ್ಡ ಜವಾಬ್ದಾರಿಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಅಕ್ಷಯ್ ರಾಜ್ ಅವರು ಈ ಪಾತ್ರ ನಾನು ಮಾಡಬೇಕೆಂದು ಹೇಳಿದಾಗ ದಿಗ್ಭ್ರಮೆಗೊಂಡಿದ್ದೆ. ಅದರೆ ಈ ಪಾತ್ರ ನಿರ್ವಹಿಸುತ್ತಿರುವುದು ನನಗೆ ಸಂತೋಷವಾಗಿದೆ ಎಂದು ಹೇಳಿರುವ ಅಕ್ಷಯ್ ಕುಮಾರ್ ಬಹುಸಮಯದ ಆಸೆ ಈಡೇರಿದೆ ಎಂದು ಬರೆದುಕೊಂಡಿದ್ದಾರೆ.

ಶಿವಾಜಿ ಮಹಾರಾಜರ ಜೀವನದಿಂದ ಸ್ಫೂರ್ತಿ ಪಡೆದುಕೊಂಡು ಹಾಗೂ ತಾಯಿ ಜೀಜಾ ಅವರ ಆಶೀರ್ವಾದದಿಂದ ಪಾತ್ರಕ್ಕೆ ನನ್ನ ಕೈಲಾದಷ್ಟು ನ್ಯಾಯ ಸಲ್ಲಿಸುತ್ತೇನೆ ಎಂದು ಅಕ್ಷಯ್ ಬರೆದುಕೊಂಡಿದ್ದಾರೆ. ನಿಮ್ಮೆಲ್ಲರ ಆಶೀರ್ವಾದ ನನ್ನ ಮೇಲಿರಲಿ ಎಂದು ಅಕ್ಷಯ್ ಅಭಿಮಾನಿಗಳನ್ನು ವಿನಂತಿಸಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...