ಕಲಬುರಗಿ : ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ಪರ ಪ್ರಚಾರ ಮಾಡಿದ ಆರೋಪದಡಿ ಅಯ್ಯಣ್ಣ ಮರದೂರು ಎಂಬ ಸರ್ಕಾರಿ ನೌಕರನನ್ನು ಅಮಾನತು ಮಾಡಲಾಗಿದೆ.
ಶಿಕ್ಷಣ ಇಲಾಖೆ ಪ್ರಥಮ ದರ್ಜೆ ಸಹಾಯಕ ಅಯ್ಯಣ್ಣ ಮರದೂರು ಎಂಬುವವರು ವಿಧಾನಸಭೆ ಚುನಾವಣೆ ವೇಳೆ ಸೋಶಿಯಲ್ ಮೀಡಿಯಾದಲ್ಲಿ ಬಿಜೆಪಿ ಪರ ಪ್ರಚಾರ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ತನಿಖೆ ನಡೆಸಿ ಅಯ್ಯಣ್ಣ ಮರದೂರು ಅಮಾನತು ಮಾಡಿ ಕಲಬುರಗಿ ವಿಭಾಗದ ಶಿಕ್ಷಣ ಇಲಾಖೆ ಆಯುಕ್ತ ಆನಂದ ಪ್ರಕಾಶ್ ಮೀನಾ ಆದೇಶ ಹೊರಡಿಸಿದ್ದಾರೆ..