alex Certify ಮತ್ತೆ ಪ್ರತಿಧ್ವನಿಸಿದ ವರ್ಗಾವಣೆ ದಂಧೆ: ಲೋಕಸಭೆ ಚುನಾವಣೆಗೆ ಹಣ ಸಂಗ್ರಹಿಸಲು ಲಂಚ ಪಡೆದ ಆರೋಪ: ಅಬಕಾರಿ ಸಚಿವರ ವಿರುದ್ಧ ಇಡಿಗೆ ದೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೆ ಪ್ರತಿಧ್ವನಿಸಿದ ವರ್ಗಾವಣೆ ದಂಧೆ: ಲೋಕಸಭೆ ಚುನಾವಣೆಗೆ ಹಣ ಸಂಗ್ರಹಿಸಲು ಲಂಚ ಪಡೆದ ಆರೋಪ: ಅಬಕಾರಿ ಸಚಿವರ ವಿರುದ್ಧ ಇಡಿಗೆ ದೂರು

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಮತ್ತೆ ವರ್ಗಾವಣೆ ದಂಧೆ ಆರೋಪ ಪ್ರತಿಧ್ವನಿಸಿದೆ. ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರ ವಿರುದ್ಧ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದ್ದಾರೆ.

ಅಬಕಾರಿ ಇಲಾಖೆ ಡಿಸಿ, ಡಿವೈಎಸ್ಪಿ ಗಳಿಂದ ಹಣ ಪಡೆದು ಹಣ ಪಡೆದು ವರ್ಗಾವಣೆ ಮಾಡಲಾಗಿದೆ. ಲೋಕಸಭೆ ಚುನಾವಣೆಗೆ ಹಣ ಹೊಂದಿಸಲು ಲಂಚ ಸ್ವೀಕರಿಸಿದ ಆರೋಪ ಮಾಡಲಾಗಿದೆ. ವರ್ಗಾವಣೆಯ ಹೆಸರಲ್ಲಿ ದಂಧೆ ನಡೆಸುತ್ತಿದ್ದಾರೆ. 18 ಕೋಟಿ ರೂಪಾಯಿ ಸ್ವೀಕರಿಸಿದ್ದಾರೆ ಎಂದು ಆರೋಪಿಸಿ ಇಡಿಗೆ ದೂರು ನೀಡಲಾಗಿದೆ.

18 ಕೋಟಿ ಹಣದಲ್ಲಿ 13 ಕೋಟಿ ರೂ. ಸಚಿವರಿಗೆ, ಉಳಿದ ಹಣ ಸಹಾಯಕ ಕಾರ್ಯದರ್ಶಿ ಸೇರಿ ಹಲವರು ಪಾಲಾಗಿದೆ. ಕೋಲಾರ ಅಬಕಾರಿ ಡಿಸಿ, ಬೆಂಗಳೂರು ದಕ್ಷಿಣ ಅಬಕಾರಿ ಡಿಸಿ ಅವರ ಖಾತೆಗೆ ಹಣ ತಲುಪಿದೆ. ಲಂಚದ ಹಣದಲ್ಲಿ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ದೂರು ನೀಡಲಾಗಿದೆ. ಅಬಕಾರಿ ಸಚಿವರ ಲಂಚಾವತಾರಕ್ಕೆ ಸರ್ಕಾರ ಕುಮ್ಮಕ್ಕು ನೀಡುತ್ತಿದ್ದು, ಇಡಿಯಿಂದ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ದೂರು ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...