alex Certify ಠಾಣೆಗೆ ಮಹಿಳೆ ಕರೆಸಿ ಹಲ್ಲೆ ಆರೋಪ: ಪೊಲೀಸರ ವಿರುದ್ಧ ವಕೀಲರ ಪ್ರತಿಭಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಠಾಣೆಗೆ ಮಹಿಳೆ ಕರೆಸಿ ಹಲ್ಲೆ ಆರೋಪ: ಪೊಲೀಸರ ವಿರುದ್ಧ ವಕೀಲರ ಪ್ರತಿಭಟನೆ

ಬೆಳಗಾವಿ: ಟಿಳಕವಾಡಿ ಪೊಲೀಸ್ ಠಾಣೆಗೆ ಮಹಿಳೆಯರನ್ನು ಕರೆಸಿ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಹಲ್ಲೆಯನ್ನು ಖಂಡಿಸಿ ಬೆಳಗಾವಿ ವಕೀಲರ ಸಂಘದಿಂದ ಬೆಳಗಾವಿ ನಗರ ಪೊಲೀಸ್ ಆಯುಕ್ತರ ಕಚೇರಿ ಎದುರು ಪ್ರತಿಭಟನೆ ನಡೆಸಲಾಗಿದೆ.

ಕಾಂಚನಾ ಗೌಳಿ ಅವರನ್ನು ಕರೆಸಿ ಹಲ್ಲೆ ನಡೆಸಲಾಗಿದೆ. ಮನೆ ಜಾಗದ ಕುರಿತಾಗಿ ಕಾಂಚನಾ ಸಂಬಂಧಿಕರು ಕೇಸು ದಾಖಲಿಸಿದ್ದರು. ಪ್ರಕರಣದ ಸಂಬಂಧ ಟಿಳಕವಾಡಿ ಠಾಣೆಗೆ ಕರೆಸಿಕೊಂಡು ಹಲ್ಲೆ ಮಾಡಿರುವುದಾಗಿ ಟಿಳಕವಾಡಿ ಪೊಲೀಸರ ವಿರುದ್ಧ ಧಿಕ್ಕಾರ ಕೂಗಿ ವಕೀಲರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೋಮವಾರದೊಳಗೆ ಹಲ್ಲೆ ಮಾಡಿದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಲಾಗಿದ್ದು, ಇಲ್ಲವಾದರೆ ಕೋರ್ಟ್ ಕಲಾಪ ಬಹಿಷ್ಕರಿಸಿ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಲಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ವಾಪಸ್ ಪಡೆಯಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...