ಬೆಂಗಳೂರು : ರಾಜ್ಯದ ಹಲವು ಕಡೆ ಕಾವೇರಿ ಕಿಚ್ಚು ಜೋರಾಗಿದ್ದು, ಸೆ.26ರಂದು ಬೆಂಗಳೂರು ಬಂದ್ ಜೊತೆಗೆ ರಾಮನಗರವೂ ಬಂದ್ ಆಗಲಿದೆ. ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ನೀಡಿದೆ.
ರಾಮನಗರ, ಚನ್ನಪಟ್ಟಣ, ಬಿಡದಿ ಪಟ್ಟಣ ಸಂಪೂರ್ಣ ಬಂದ್ ಆಗಲಿದ್ದು, ಹೋಟೆಲ್ ಮಾಲೀಕರ ಸಂಘ, ವಕೀಲರ ಸಂಘ, ಆಟೋ ಚಾಲಕರ ಸಂಘ ಸೇರಿ ಹಲವು ಸಂಘಟನೆಗಳು ಬೆಂಬಲ ನೀಡಿದೆ.ಬೆಳಗ್ಗೆ 10ಕ್ಕೆ ಎಪಿಎಂಸಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲು ವಿವಿಧ ಸಂಘಟನೆಗಳು ಸಿದ್ಧತೆ ನಡೆಸಿವೆ.