alex Certify ಕಾಂಗ್ರೆಸ್ ನಿಂದ ಕಾಲು ಹೊರಗಿಟ್ಟ ಮಾಜಿ ಸಿಎಂ ಅಚ್ಚರಿ ಹೇಳಿಕೆ: ಬಿಜೆಪಿ ಸೇರಲ್ಲ, ಕಾಂಗ್ರೆಸ್ ನಲ್ಲಿರಲ್ಲ; ಅಮರೀಂದರ್ ಸಿಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ನಿಂದ ಕಾಲು ಹೊರಗಿಟ್ಟ ಮಾಜಿ ಸಿಎಂ ಅಚ್ಚರಿ ಹೇಳಿಕೆ: ಬಿಜೆಪಿ ಸೇರಲ್ಲ, ಕಾಂಗ್ರೆಸ್ ನಲ್ಲಿರಲ್ಲ; ಅಮರೀಂದರ್ ಸಿಂಗ್

ನವದೆಹಲಿ: ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಕಾಂಗ್ರೆಸ್ ಪಕ್ಷದಿಂದ ಕಾಲು ಹೊರಗಿಟ್ಟಿರುವ ಮಾಜಿ ಸಿಎಂ ಕ್ಯಾ. ಅಮರೀಂದರ್ ಸಿಂಗ್, ಬಿಜೆಪಿ ಸೇರುವುದಿಲ್ಲ ಎಂದು ಘೋಷಿಸಿದರು.

ಇಲ್ಲಿಯವರೆಗೆ ನಾನು ಕಾಂಗ್ರೆಸ್‌ನಲ್ಲಿದ್ದೇನೆ. ಆದರೆ, ನಾನು ಕಾಂಗ್ರೆಸ್‌ ನಲ್ಲಿ ಉಳಿಯುವುದಿಲ್ಲ. ನಾನು ಈಗಾಗಲೇ ನನ್ನ ನಿಲುವನ್ನು ಸ್ಪಷ್ಟಪಡಿಸಿದ್ದೇನೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಒಂದು ದಿನದ ನಂತರ ಸಂದರ್ಶನವೊಂದರಲ್ಲಿ ಕ್ಯಾಪ್ಟನ್ ಹೇಳಿದ್ದಾರೆ.

ಅಮಿತ್ ಶಾ ಭೇಟಿ ನಂತರ, ಅವರು ತಮ್ಮ ಟ್ವಿಟರ್ ಬಯೋದಿಂದ ಕಾಂಗ್ರೆಸ್ ಪದ ಕೈಬಿಟ್ಟಿದ್ದಾರೆ. ಪಂಜಾಬ್‌ನಲ್ಲಿ ಕಾಂಗ್ರೆಸ್ ಪತನದ ಬಗ್ಗೆ ಭವಿಷ್ಯ ನುಡಿದ ಅವರು ಪ್ರತಿಸ್ಪರ್ಧಿ ನವಜೋತ್ ಸಿಂಗ್ ಸಿಧು ಅವರನ್ನು ಬಾಲಿಶ ವ್ಯಕ್ತಿ ಎಂದು ಟೀಕಿಸಿದ್ದಾರೆ.

ನಾನು 52 ವರ್ಷಗಳಿಂದ ರಾಜಕೀಯದಲ್ಲಿದ್ದೇನೆ. ನನಗೆ ನನ್ನದೇ ಆದ ನಂಬಿಕೆಗಳು, ನನ್ನದೇ ಆದ ತತ್ವಗಳಿವೆ. ನನ್ನೊಂದಿಗೆ ನಡೆದುಕೊಂಡ ರೀತಿ ಸರಿ ಇರಲಿಲ್ಲ. ಬೆಳಿಗ್ಗೆ 10.30 ಕ್ಕೆ ಕಾಂಗ್ರೆಸ್ ಅಧ್ಯಕ್ಷರು ನೀವು ರಾಜೀನಾಮೆ ನೀಡಿ ಎಂದಾಗ ನಾನು ಯಾವುದೇ ಪ್ರಶ್ನೆಗಳನ್ನು ಕೇಳಲಿಲ್ಲ. ನಾನು ಹೇಳಿದೆ ಈಗಲೇ ಮಾಡುತ್ತೇನೆ. ಸಂಜೆ 4 ಗಂಟೆಗೆ ನಾನು ರಾಜ್ಯಪಾಲರ ಬಳಿ ಹೋಗಿ ರಾಜೀನಾಮೆ ನೀಡಿದ್ದೇನೆ. 50 ವರ್ಷಗಳ ನಂತರ ನೀವು ನನ್ನನ್ನು ಅನುಮಾನಿಸಿದರೆ ವಿಶ್ವಾಸಾರ್ಹತೆ ಅಪಾಯದಲ್ಲಿದೆ. ವಿಶ್ವಾಸವಿಲ್ಲದಿದ್ದರೆ ನಾನು ಸಿಎಂ ಆಗಿ ಉಳಿಯುವುದರಲ್ಲಿ ಅರ್ಥವೇನಿದೆ ಎಂದು ಪ್ರಶ್ನಿಸಿದ್ದಾರೆ.

ಸೆಪ್ಟೆಂಬರ್ 18 ರಂದು ರಾಜೀನಾಮೆ ನೀಡುವ ದಿನ ಪಕ್ಷದಿಂದ ಮೂರು ಬಾರಿ ಅವಮಾನ ಮಾಡಲಾಗಿದೆ ಎಂದು ಅಮರೀಂದರ್ ಸಿಂಗ್ ಆರೋಪಿಸಿದ್ದರು.

ನಾನು ಕಾಂಗ್ರೆಸ್‌ಗೆ ನನ್ನ ನಿಲುವನ್ನು ಸ್ಪಷ್ಟಪಡಿಸಿದ್ದೇನೆ, ನಾನು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿಲ್ಲ, ಆದರೆ ನಂಬಿಕೆ ಕೊರತೆ ಇರುವ ಸ್ಥಳದಲ್ಲಿ ಹೇಗೆ ಮುಂದುವರಿಯಬಹುದು? ಎಂದು ಪ್ರಶ್ನಿಸಿದ್ದಾರೆ. ಅಮಿತ್ ಶಾ ಅವರನ್ನು ಭೇಟಿ ಮಾಡಿದ ನಂತರ ಕಾಂಗ್ರೆಸ್ ಸೇರಿದಂತೆ ಎಲ್ಲರೂ ಅಮರೀಂದರ್ ಸಿಂಗ್ ಬಿಜೆಪಿ ಸೇರಲಿದ್ದಾರೆ ಎಂದುಕೊಂಡಿದ್ದಾರೆ. ಆದರೆ, ನಾನು ಬಿಜೆಪಿ ಸೇರುತ್ತಿಲ್ಲ ಎಂದು ತಿಳಿಸಿದ್ದಾರೆ.

ನಾನು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿಲ್ಲ. ಆದರೆ, ರಾಜೀನಾಮೆ ನೀಡುತ್ತೇನೆ. ನಾನು ವಿಭಜಿತ ನಿರ್ಧಾರಗಳನ್ನು ತೆಗೆದುಕೊಳ್ಳುವ ವ್ಯಕ್ತಿಯಲ್ಲ. ನಾನು ಬಿಜೆಪಿ ಸೇರುತ್ತಿಲ್ಲ ಎಂದು ಹೇಳಿದ್ದಾರೆ.

ಎರಡು ಬಾರಿ ಮುಖ್ಯಮಂತ್ರಿಯ ಹಠಾತ್ ನಿರ್ಗಮನದಲ್ಲಿ ದೊಡ್ಡ ಪಾತ್ರವನ್ನು ನಿರ್ವಹಿಸಿದ ನವಜೋತ್ ಸಿಧು, ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಪಕ್ಷವನ್ನು ದಿಗ್ಭ್ರಮೆಗೊಳಿಸಿದ್ದಾರೆ.

ಸಿಧು ಅಪಕ್ವ ವ್ಯಕ್ತಿ ಜನ ಸೆಳೆಯುವಲ್ಲಿ ನಿಪುಣರು. ಅವರು ಒಳ್ಳೆಯ ನಾಟಕಕಾರ, ಕಪಿಲ್ ಶರ್ಮಾ ಶೋನಲ್ಲಿ ಅವರು ಮಾಡಿದ್ದನ್ನು ಇಲ್ಲಿಯೂ ಮಾಡಬಹುದು. ಆದರೆ ಆತ ಗಂಭೀರ ವ್ಯಕ್ತಿ ಅಲ್ಲ. ಗಂಭೀರವಲ್ಲದ ವ್ಯಕ್ತಿಯು ಪಕ್ಷ ಮತ್ತು ರಾಜ್ಯ ಸರ್ಕಾರದ ಆಡಳಿತದಲ್ಲಿ ಹೇಗೆ ಗಂಭೀರ, ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯ ಎಂದು ಅಮರೀಂದರ್ ಸಿಂಗ್ ಪ್ರಶ್ನಿಸಿದ್ದಾರೆ.

ಪಂಜಾಬ್ ನಾಯಕತ್ವದ ಅವ್ಯವಸ್ಥೆಯನ್ನು ನಿಭಾಯಿಸಿದ್ದಕ್ಕಾಗಿ ಟೀಕೆಗಳನ್ನು ಎದುರಿಸುತ್ತಿರುವ ರಾಹುಲ್ ಗಾಂಧಿಯವರ ಬಗ್ಗೆ ಮಾತನಾಡಿದ ಸಿಂಗ್, ಅವರು ಪಕ್ಷಕ್ಕೆ ಯುವಕರನ್ನು ತರಲು ಬಯಸುತ್ತಾರೆ. ಆದರೆ ಪಕ್ಷದ ಹಿರಿಯ ನಾಯಕರ ಸಲಹೆಯನ್ನು ಕೇಳಲು ನಿರಾಕರಿಸುತ್ತಾರೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಪಂಜಾಬ್ ಚುನಾವಣೆಯಲ್ಲಿ ಕಾಂಗ್ರೆಸ್ ಭವಿಷ್ಯವನ್ನು ಕ್ಯಾಪ್ಟನ್ ಊಹಿಸಿದ್ದಾರೆ.

ಕಾಂಗ್ರೆಸ್ ಇಳಿಮುಖವಾಗುತ್ತಿದೆ. ಪ್ರಸ್ತುತ ಸನ್ನಿವೇಶದಲ್ಲಿ, ಜುಲೈ ಮತ್ತು ಸೆಪ್ಟೆಂಬರ್ ನಡುವೆ ಕಾಂಗ್ರೆಸ್ ಇತ್ತೀಚೆಗೆ ನಡೆಸಿದ ಸಮೀಕ್ಷೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಏರುತ್ತಿದೆ, ಕಾಂಗ್ರೆಸ್ ಕೆಳಗಿಳಿಯುತ್ತಿದೆ ಎಂದು ನೋಡುತ್ತೇವೆ. ಜನರು ಸ್ಪಷ್ಟವಾಗಿ ಇಲ್ಲ. ಸಿಧು ಮೇಲೆ ವಿಶ್ವಾಸವಿದೆ. ಆ ಸಮೀಕ್ಷೆಯ ಪ್ರಕಾರ ಕಾಂಗ್ರೆಸ್ ಶೇ. 20 ಕುಸಿತ ಕಂಡಿದೆ ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್, ಎಎಪಿ, ಅಕಾಲಿ ದಳ, ಅಕಾಲಿದಳದ ಬಣಗಳೊಂದಿಗೆ ಈ ಚುನಾವಣೆ ತುಂಬಾ ಭಿನ್ನವಾಗಿರುತ್ತದೆ. ಇನ್ನೊಂದು ಬೆಳವಣಿಗೆಯೂ ಹೊರಹೊಮ್ಮಬಹುದು. ಆದ್ದರಿಂದ, ಇದು ವಿಭಿನ್ನ ಚುನಾವಣೆಯಾಗಿದೆ ಎಂದು ಅವರು ಪ್ರತಿಕ್ರಿಯಿಸಿದ್ದು, ಹೊಸ ಪಕ್ಷ ಸ್ಥಾಪಿಸಲು ತಯಾರಿ ಮಾಡುತ್ತಿದ್ದಾರೆಯೇ ಎಂಬ ಪ್ರಶ್ನೆಗೆ ಯಾವುದೇ ಉತ್ತರ ನೀಡಿಲಿಲ್ಲ.

ಹಿರಿಯ ಕಾಂಗ್ರೆಸ್ ಮುಖಂಡರಾದ ಅಂಬಿಕಾ ಸೋನಿ ಮತ್ತು ಕಮಲ್ ನಾಥ್ ಅವರು ಅಮರೀಂದರ್ ಸಿಂಗ್ ಅವರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು ಎಂದು ಮೂಲಗಳು ತಿಳಿಸಿವೆ. ಆದರೆ ಮಂಗಳವಾರದಿಂದ ದೆಹಲಿಯಲ್ಲಿದ್ದ ಕ್ಯಾಪ್ಟನ್, ತನ್ನ ಪಕ್ಷದ ಅಧ್ಯಕ್ಷರನ್ನು ಭೇಟಿಯಾಗಲಿಲ್ಲ. ಇಂದು ಬೆಳಿಗ್ಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ಭೇಟಿ ಮಾಡಿದರು. ರಾಜ್ಯದಲ್ಲಿ ರಾಜಕೀಯ ಗೊಂದಲಗಳ ನಡುವೆ ಅವರು ಪಂಜಾಬ್ ಗಡಿ ಭದ್ರತೆಯ ಬಗ್ಗೆ ಚರ್ಚಿಸಿರಬಹುದು ಎಂದು ಮೂಲಗಳು ಹೇಳುತ್ತವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...