alex Certify BIG NEWS: ಹೊಸ ಸಚಿವರಿಗೆ ಪ್ರಮುಖ ಖಾತೆ, ಹಳಬರ ಖಾತೆಯಲ್ಲಿ ಬದಲಾವಣೆ ಬಗ್ಗೆ ಅಮಿತ್ ಶಾ ಜೊತೆ ಚರ್ಚೆ..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹೊಸ ಸಚಿವರಿಗೆ ಪ್ರಮುಖ ಖಾತೆ, ಹಳಬರ ಖಾತೆಯಲ್ಲಿ ಬದಲಾವಣೆ ಬಗ್ಗೆ ಅಮಿತ್ ಶಾ ಜೊತೆ ಚರ್ಚೆ..?

ಬೆಂಗಳೂರು: ಸಿಎಂ ಯಡಿಯೂರಪ್ಪ ಸಂಪುಟಕ್ಕೆ ಸೇರ್ಪಡೆಯಾದ 7 ಮಂದಿ ನೂತನ ಸಚಿವರಿಗೆ ಇನ್ನು ಖಾತೆ ಹಂಚಿಕೆ ಮಾಡಲಾಗಿಲ್ಲ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಜನವರಿ 16, 17 ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದು, ಅವರ ಭೇಟಿಯ ಬಳಿಕ ಖಾತೆ ಹಂಚಿಕೆ ಮಾಡಲಾಗುವುದು ಎಂದು ಹೇಳಲಾಗಿದೆ. ಉಮೇಶ್ ಕತ್ತಿ, ಅರವಿಂದ ಲಿಂಬಾವಳಿ, ಮುರುಗೇಶ್ ನಿರಾಣಿ, ಸಿ.ಪಿ. ಯೋಗೇಶ್ವರ್, ಎಂಟಿಬಿ ನಾಗರಾಜ್ ಅವರಿಗೆ ಪ್ರಮುಖ ಖಾತೆ ಸಿಗುವ ನಿರೀಕ್ಷೆಯಿದೆ.

ಅಮಿತ್ ಶಾ ಒಪ್ಪಿಗೆ ನೀಡಿದಲ್ಲಿ ಹಲವು ಸಚಿವರ ಖಾತೆಗಳನ್ನು ಬದಲಾವಣೆ ಮಾಡಲು ಸಿಎಂ ಯಡಿಯೂರಪ್ಪ ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಇವತ್ತು ಖಾತೆ ಹಂಚಿಕೆ ಮಾಡುವ ಸಾಧ್ಯತೆ ಇದ್ದು, ಒಂದು ವೇಳೆ ಖಾತೆ ಹಂಚಿಕೆಯಾಗದಿದ್ದರೆ ಅಮಿತ್ ಶಾ ಅವರೊಂದಿಗೆ ಚರ್ಚಿಸಿ ಖಾತೆ ಹಂಚಿಕೆ ಮಾಡಲಾಗುತ್ತದೆ.

ಅಮಿತ್ ಶಾ ಅವರೊಂದಿಗೆ ಶನಿವಾರ ರಾತ್ರಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಸಭೆಯಲ್ಲಿ ಖಾತೆ ಹಂಚಿಕೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...