alex Certify ಅಮಿತ್ ಶಾ ಕರೆಯ ಮೇರೆಗೆ ದೆಹಲಿಗೆ ಹೋಗಿದ್ದ ಈಶ್ವರಪ್ಪಗೆ ನಿರಾಸೆ: ಬಂಡಾಯ ಸ್ಪರ್ಧೆ ನಿಶ್ಚಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಮಿತ್ ಶಾ ಕರೆಯ ಮೇರೆಗೆ ದೆಹಲಿಗೆ ಹೋಗಿದ್ದ ಈಶ್ವರಪ್ಪಗೆ ನಿರಾಸೆ: ಬಂಡಾಯ ಸ್ಪರ್ಧೆ ನಿಶ್ಚಿತ

ನವದೆಹಲಿ: ಕೇಂದ್ರ ಸಚಿವ ಅಮಿತ್ ಶಾ ಅವರ ಕರೆಯ ಮೇರೆಗೆ ದೆಹಲಿಗೆ ಹೋಗಿದ್ದ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರಿಗೆ ನಿರಾಸೆಯಾಗಿದೆ.

ದೆಹಲಿಗೆ ಈಶ್ವರಪ್ಪ ಅವರನ್ನು ಕರೆಸಿಕೊಂಡು ಅಮಿತ್ ಶಾ ಭೇಟಿಯಾಗಿಲ್ಲ. ದೆಹಲಿಗೆ ಈಶ್ವರಪ್ಪ ತಲುಪಿದ ನಂತರ ಭೇಟಿ ಕಾರ್ಯಕ್ರಮ ರದ್ದಾಗಿದೆ ಎಂದು ಅಮಿತ್ ಶಾ ಅವರ ಕಚೇರಿಯಿಂದ ಮಾಹಿತಿ ಬಂದಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ಇನ್ನು ಯಾರನ್ನು ಭೇಟಿಯಾಗುವುದಿಲ್ಲ. ಶಿವಮೊಗ್ಗದಲ್ಲಿ ನನ್ನ ಸ್ಪರ್ಧೆ ಖಚಿತ ಎಂದು ಹೇಳಿದ್ದಾರೆ.

ದೆಹಲಿಗೆ ಹೋಗುವ ಮೊದಲು ಬಿಜೆಪಿ ರಾಜ್ಯಾಧ್ಯಕ್ಷರನ್ನು ಬದಲಾಯಿಸಿದರೆ ಮಾತ್ರ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳುವುದಾಗಿ ಈಶ್ವರಪ್ಪ ತಿಳಿಸಿದ್ದರು. ಆದರೆ, ಅಮಿತ್ ಶಾ ಭೇಟಿ ಸಾಧ್ಯವಾಗಿಲ್ಲ. ದೆಹಲಿಯಲ್ಲಿ ಮಾತನಾಡಿದ ಈಶ್ವರಪ್ಪ, ನನ್ನ ಸ್ಪರ್ಧೆಗೆ ಪರೋಕ್ಷವಾಗಿ ಅಮಿತ್ ಶಾ ಬೆಂಬಲ ನೀಡಿರುವಂತಿದೆ. ಅವರ ಕಚೇರಿಯಿಂದ ಭೇಟಿ ರದ್ದಾಗಿದೆ ಎಂದು ಮಾಹಿತಿ ಬಂದಿದೆ. ಇನ್ನು ಶಿವಮೊಗ್ಗದಲ್ಲಿ ನನ್ನ ಸ್ಪರ್ಧೆ ಖಚಿತ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...