alex Certify BIG NEWS : ನಿರ್ಮಾಪಕ ಕುಮಾರ್ ಆರೋಪಕ್ಕೆ ಕೆರಳಿದ ಕಿಚ್ಚ : 10 ಕೋಟಿ ಪರಿಹಾರಕ್ಕೆ ಡಿಮ್ಯಾಂಡ್, ಲೀಗಲ್ ನೋಟಿಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ನಿರ್ಮಾಪಕ ಕುಮಾರ್ ಆರೋಪಕ್ಕೆ ಕೆರಳಿದ ಕಿಚ್ಚ : 10 ಕೋಟಿ ಪರಿಹಾರಕ್ಕೆ ಡಿಮ್ಯಾಂಡ್, ಲೀಗಲ್ ನೋಟಿಸ್

ಬೆಂಗಳೂರು : ಸ್ಯಾಂಡಲ್ ವುಡ್ ನಿರ್ಮಾಪಕ ಎಂ ಎನ್ ಕುಮಾರ್ ಮಾಡಿದ ಆರೋಪಗಳಿಗೆ ನಟ ಕಿಚ್ಚ ಸುದೀಪ್ ಖಡಕ್ ಉತ್ತರ ನೀಡಿದ್ದಾರೆ. ಕಿಚ್ಚ ಸುದೀಪ್ 10 ಕೋಟಿ ಹಣ ತೆಗೆದುಕೊಂಡು ಕೈಗೆ ಸಿಗುತ್ತಿಲ್ಲ ಎಂಬ ಆರೋಪಕ್ಕೆ ಸುದೀಪ್ ಉತ್ತರ ನೀಡಿದ್ದಾರೆ.

ಕುಮಾರ್ ಮಾಡಿದ ಆರೋಪಕ್ಕೆ ಉತ್ತರ ನೀಡಿದ ಸುದೀಪ್ 10 ಕೋಟಿ ರೂ ಪರಿಹಾರ ನೀಡುವಂತೆ ನೋಟಿಸ್ ಕಳುಹಿಸಿದ್ದಾರೆ ಹಾಗೆಯೇ ಕ್ರಿಮಿನಲ್ ಕೇಸ್ ಕೂಡ ದಾಖಲಿಸಿದ್ದಾರೆ. ಸುದೀಪ್ ಕನ್ನಡ ಚಿತ್ರರಂಗದಲ್ಲಿ 20 ವರ್ಷದಿಂದ ನಟಿಸುತ್ತಿದ್ದಾರೆ, ಸಮಾಜ ಸೇವೆಯ ಮೂಲಕ ಹಲವರಿಗೂ ಮಾದರಿಯಾಗಿದ್ದಾರೆ, ನೀವು ಮಾಡಿರುವ ಆರೋಪ ಸುಳ್ಳಾಗಿದ್ದು, ಮಾನಹಾನಿ ಉಂಟು ಮಾಡಿದ್ದೀರಾ..? ನೀವು ಕ್ಷಮೆಯಾಚಿಸಬೇಕು ಹಾಗೂ ಪರಿಹಾರ ನೀಡಬೇಕು ಎಂದು ಸುದೀಪ್ ಪರ ವಕೀಲರು ಲೀಗಲ್ ನೋಟಿಸ್ ನೀಡಿದ್ದಾರೆ.  ಸುದ್ದಿಗೋಷ್ಟಿಯಲ್ಲಿ ಅಧಾರ ರಹಿತ ಆರೋಪ ಮಾಡಿದ್ದಾರೆ. ಆದ್ದರಿಂದ ಮಾಧ್ಯಮಗಳ ಮೂಲಕ ಕ್ಷಮೆಯಾಚಿಸಬೇಕೆಂದು ನೋಟಿಸ್ ನಲ್ಲಿ ತಾಕೀತು ಮಾಡಿದ್ದಾರೆ.

ಕೆಲವು ದಿನಗಳ ಹಿಂದೆ ಸುದ್ದಿಗೋಷ್ಟಿ ನಡೆಸಿದ ಕಿಚ್ಚ ಸುದೀಪ್ ಅವರಿಗೆ ಒಂದು ಸಿನಿಮಾದ ಅಡ್ವಾನ್ಸ್ ಕೊಟ್ಟಿದ್ದೇನೆ, ಆದರೆ ಅವರು ಕೈಗೆ ಸಿಗುತ್ತಿಲ್ಲ. ಹಣಕೊಟ್ಟು ಬೇಡುವ ಸ್ಥಿತಿಬಂದಿದೆ ಎಂದು ಕುಮಾರ್ ವಾಣಿಜ್ಯ ಮಂಡಳಿಗೆ ಮನವಿ ಪತ್ರ ಸಲ್ಲಿಸಿದ್ದರು. ಈ ಆರೋಪಕ್ಕೆ ನಟ ಕಿಚ್ಚ ಸುದೀಪ್ ಉತ್ತರ ನೀಡಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...